ಸೆಲ್ಫಿ ಗೀಳಿಗೆ ಇಬ್ಬರು ಬಲಿ: ಸೇತುವೆ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕರ ಮೇಲೆ ಹರಿದ ರೈಲು, ಸಾವು

ಸೆಲ್ಫಿ ಗೀಳಿಗೆ ಇಬ್ಬರು ಬಲಿಯಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಸೇತುವೆ ಮೇಲೆ ಸೆಲ್ಫಿ ತೆಗೆದುಕೊಳ್ಳುವಾಗ ರೈಲು ಢಿಕ್ಕಿ
ಸೇತುವೆ ಮೇಲೆ ಸೆಲ್ಫಿ ತೆಗೆದುಕೊಳ್ಳುವಾಗ ರೈಲು ಢಿಕ್ಕಿ
Updated on

ಡೆಹ್ರಾಡೂನ್: ಸೆಲ್ಫಿ ಗೀಳಿಗೆ ಇಬ್ಬರು ಬಲಿಯಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪಟ್ಟಣದ ರೈಲ್ವೇ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಇಬ್ಬರು ಹದಿಹರೆಯದವರ ಮೇಲೆ ರೈಲು ಹರಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ ಈ ಅವಘಡ ಸಂಭವಿಸಿದೆ ಎಂದು ಲಕ್ಸರ್ ಪೊಲೀಸ್ ಠಾಣೆ ಪ್ರಭಾರಿ ಮಮತಾ ಗೋಲಾ ಸೋಮವಾರ ತಿಳಿಸಿದ್ದಾರೆ.

ಸಿದ್ಧಾರ್ಥ್ ಸೈನಿ (19) ಮತ್ತು 16 ವರ್ಷದ ಶಿವಂ ಸೈನಿ ಅವರು ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್ ದೋಸ್ನಿ ರೈಲ್ವೆ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ.  ರೈಲು ಢಿಕ್ಕಿ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಇಬ್ಬರೂ ಸೋಲಾನಿ ನದಿಯ ದಡದಲ್ಲಿ ಧಾರ್ಮಿಕ ಆಚರಣೆಯನ್ನು ಮಾಡಲು ತಮ್ಮ ಹಳ್ಳಿಯಿಂದ ತಮ್ಮ ಕುಟುಂಬದೊಂದಿಗೆ ಲಕ್ಸಾರ್‌ಗೆ ಬಂದಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ನದಿಗೆ ಅಡ್ಡಲಾಗಿರುವ ರೈಲ್ವೆ ಸೇತುವೆಯನ್ನು ಏರಿ ಸೆಲ್ಫೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ದೆಹಲಿಗೆ ಹೋಗುವ ರೈಲು ವೇಗವಾಗಿ ಬಂದು ಢಿಕ್ಕಿಯಾಗಿದೆ ಎಂದು ಪೊಲೀಸ್ ಅಧಿಕಾರಿ ಗೋಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com