ತಾಳ್ಮೆ ಮೀರುತ್ತಿದೆ, ಕಿರುಕುಳದಿಂದ ಯಾವುದೇ ಸಮಸ್ಯೆಯಾದರೆ...: ಕೇಂದ್ರಕ್ಕೆ ಲಾಲು ಪುತ್ರಿ ರೋಹಿಣಿ ಆಚಾರ್ಯ ಎಚ್ಚರಿಕೆ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ.
ಲಾಲು ಜತೆ ಪುತ್ರಿ ರೋಹಿಣಿ ಆಚಾರ್ಯ
ಲಾಲು ಜತೆ ಪುತ್ರಿ ರೋಹಿಣಿ ಆಚಾರ್ಯ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ತಂದೆಗೆ ಮೂತ್ರಪಿಂಡ ದಾನ ಮಾಡಿರುವ ಲಾಲು ಪುತ್ರಿ ರೋಹಿಣಿ ಆಚಾರ್ಯ ಅವರು, ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಂದೆಗೆ "ಕಿರುಕುಳ" ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
  
ಸಿಂಗಾಪುರದಲ್ಲಿರುವ ರೋಹಿಣಿ ಆಚಾರ್ಯ ಅವರು, ತಮ್ಮ ತಂದೆ ರೈಲ್ವೇ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

"ಇವರು ನಮ್ಮ ತಂದೆಗೆ ಕಿರುಕುಳ ನೀಡುತ್ತಿದ್ದಾರೆ. ಈ ಕಿರುಕುಳದಿಂದ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆಯಾದರೆ, ನಾವು ದೆಹಲಿಯ ಅಧಿಕಾರದ ಗದ್ದುಗೆಯನ್ನು ಅಲುಗಾಡಿಸುತ್ತೇವೆ. ತಾಳ್ಮೆ ಮೀರುತ್ತಿದೆ" ಎಂದು ರೋಹಿಣಿ ಆಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರು ಕಳೆದ ವರ್ಷ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದು, ಒಂದು ತಿಂಗಳ ಹಿಂದೆ ಭಾರತಕ್ಕೆ ಮರಳಿದ್ದರು. ಸೋಂಕಿನ ಹೆಚ್ಚಿನ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಮಾಸ್ ಲೀಡರ್ ತನ್ನ ತವರು ರಾಜ್ಯದಿಂದ ದೂರ ಉಳಿಯಲು ಮತ್ತು ರಾಜ್ಯಸಭಾ ಸದಸ್ಯರಾಗಿರುವ ಭಾರತಿ ಅವರ ನಿವಾಸದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com