ಬಿಹಾರ: ಗೋಮಾಂಸ ಸಾಗಾಟದ ಶಂಕೆ; ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದ ಮೂವರ ಬಂಧನ

ಬಿಹಾರದ ಸರನ್ ಜಿಲ್ಲೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಸರನ್: ಬಿಹಾರದ ಸರನ್ ಜಿಲ್ಲೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮೃತರನ್ನು ಸಿವಾನ್ ಜಿಲ್ಲೆಯ ಹಸನ್‌ಪುರ ಗ್ರಾಮದ ನಿವಾಸಿ ನಸೀಮ್ ಖುರೇಷಿ ಎಂದು ಗುರುತಿಸಲಾಗಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಂಗಳವಾರ ನಸೀಮ್ ಮತ್ತು ಅವರ ಸೋದರಳಿಯ ಫಿರೋಜ್ ಖುರೇಷಿ ಸರನ್ ಜಿಲ್ಲೆಯ ಜೋಗಿಯಾ ಗ್ರಾಮದಲ್ಲಿ ತಮ್ಮ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

"ಇಬ್ಬರನ್ನೂ ಮಸೀದಿಯ ಬಳಿ ಸ್ಥಳೀಯರು ತಡೆದರು" ಮತ್ತು ಅದರ ನಂತರ ತೀವ್ರ ವಾಗ್ವಾದ ನಡೆಯಿತು. ಫಿರೋಜ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಗುಂಪು ನಜೀಮ್ ಅವರನ್ನು ದೊಣ್ಣೆಗಳಿಂದ ಥಳಿಸಿದ್ದಾರೆ.

"ನಂತರ, ಜನ ಸ್ವತಃ ನಸೀಮ್‌ನನ್ನು ರಸೂಲ್‌ಪುರ ಗ್ರಾಮದಲ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಸೀಮ್ ನನ್ನು ಪೊಲೀಸರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ" ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಗೌರವ್ ಮಂಗಳಾ ಅವರು ತಿಳಿಸಿದ್ದಾರೆ.

"ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಶಂಕಿತರನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ" ಎಂದು ಎಸ್ ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com