ಮಹಾರಾಷ್ಟ್ರ: ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಸಾವು

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಗ್ಗೆ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬುಲ್ದಾನ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಗ್ಗೆ ಕಾರಿನ ಟೈರ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರುತಿ ಎರ್ಟಿಗಾ ಕಾರು ಇಲ್ಲಿನ ಔರಂಗಾಬಾದ್‌ನಿಂದ ಶೇಗಾಂವ್‌ಗೆ ತೆರಳುತ್ತಿದ್ದಾಗ ಶಿವನಿ ಪಿಸಾ ಗ್ರಾಮದಲ್ಲಿ ಬೆಳಗ್ಗೆ 8 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

'ಕಾರಿನಲ್ಲಿದ್ದ ಆರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಪ್ರಾಥಮಿಕವಾಗಿ, ಅಪಘಾತಕ್ಕೆ ಕಾರಣವೆಂದರೆ ಟೈರ್ ಸ್ಫೋಟವಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com