social_icon

ಆದಿತ್ಯನಾಥ್ ನ್ನು ಹೊಗಳಿದ ನಿತಿನ್ ಗಡ್ಕರಿ, ಕೃಷ್ಣನಿಗೆ ಹೋಲಿಕೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದು, ದುಷ್ಟರನ್ನು ನಿಗ್ರಹಿಸಿದ ಭಗವಾನ್ ಕೃಷ್ಣನಿಗೆ ಹೋಲಿಕೆ ಮಾಡಿದ್ದಾರೆ.

Published: 13th March 2023 11:03 PM  |   Last Updated: 13th March 2023 11:06 PM   |  A+A-


File image of Union minister Nitin Gadkari and UP CM Yogi Adityanath/ANI

ಕೇಂದ್ರ ಸಚಿವ ಗಡ್ಕರಿ- ಸಿಎಂ ಯೋಗಿ ಆದಿತ್ಯನಾಥ್

Posted By : Srinivas Rao BV
Source : The New Indian Express

ಲಖನೌ: ಕೇಂದ್ರ ಸಚಿವ ನಿತಿನ್ ಗಡ್ಕರಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದು, ದುಷ್ಟರನ್ನು ನಿಗ್ರಹಿಸಿದ ಭಗವಾನ್ ಕೃಷ್ಣನಿಗೆ ಹೋಲಿಕೆ ಮಾಡಿದ್ದಾರೆ. 
 
ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿ ನಿಯಂತ್ರಿಸುತ್ತಿರುವುದಕ್ಕೆ ಯೋಗಿ ಆದಿತ್ಯನಾಥ್ ಅವರನ್ನು ನಿತಿನ್ ಗಡ್ಕರಿ ಹೊಗಳಿದ್ದಾರೆ.

ಉತ್ತರ ಪ್ರದೇಶದಲ್ಲಿನ ರಸ್ತೆಗಳನ್ನು ಅಮೇರಿಕಾದ ರಸ್ತೆಗಳ ಸಮನಾಗಿ ಅಭಿವೃದ್ಧಿಪಡಿಸುವುದಕ್ಕೆ ಶ್ರಮಿಸಲಾಗುತ್ತಿದೆ. 

"ಸಿಎಂ ಯೋಗಿ ಆದಿತ್ಯನಾಥ್ ಜನರನ್ನು ದುಷ್ಟರಿಂದ ರಕ್ಷಿಸುವುದಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಜನತೆಯ ಪರವಾಗಿ ಹಾಗೂ ವೈಯಕ್ತಿಕವಾಗಿ ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಗಡ್ಕರಿ 10,000 ಕೋಟಿ ರೂಪಾಯಿ ಮೌಲ್ಯದ ಹಲವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಹೇಳಿದ್ದಾರೆ. 

ಇದನ್ನೂ ಓದಿ: 'ಇಂದು ವಿದೇಶದಲ್ಲಿ ಭಾರತವನ್ನು ಟೀಕಿಸುವವರು...': ರಾಹುಲ್ ವಿರುದ್ಧ ಯುಪಿ ಸಿಎಂ ಯೋಗಿ ವಾಗ್ದಾಳಿ

"ನಾನು ಇತ್ತೀಚೆಗೆ ನನ್ನ ಪತ್ನಿಯೊಂದಿಗೆ ಮಾತನಾಡುತ್ತಿದ್ದೆ. ಆಗ ಅವರು ಉತ್ತರ ಪ್ರದೇಶದಲ್ಲೇನಾಗುತ್ತಿದೆ? ಎಂದು ಪ್ರಶ್ನಿಸಿದ್ದರು. ಸರ್ಕಾರ 6 ವರ್ಷಗಳಿಂದ ಅಪರಾಧಗಳ ತಡೆಗೆ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಹೇಳಿದಾಗ ಆಕೆ ಅಧರ್ಮ ಹೆಚ್ಚಾದಾಗಲೆಲ್ಲಾ ಅವತರಿಸಿ ಬರುವೆ ಎಂದು ಭಗವಂತ ಭಗವದ್ಗೀತೆಯಲ್ಲಿ ಹೇಳಿದ್ದನ್ನು ಉಲ್ಲೇಖಿಸಿದರು" ಎಂದು ಗಡ್ಕರಿ ಹೇಳಿದ್ದಾರೆ.

ಭಗವಾನ್ ಕೃಷ್ಣ ಮಾಡಿದ ಕೆಲಸಗಳ ಮಾದರಿಯಲ್ಲೇ ಯೋಗಿ ಆದಿತ್ಯನಾಥ್ ಸಹ ಕೆಲಸ ಮಾಡುತ್ತಿದ್ದಾರೆ. ಅವರು ಸಜ್ಜನರನ್ನು ರಕ್ಷಿಸುತ್ತಿದ್ದಾರೆ. ಸಮಾಜಕ್ಕೆ ಕಂಟಕರಾಗಿರುವವರ ವಿರುದ್ಧ ಯೋಗಿ ಆದಿತ್ಯನಾಥ್ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸಿಎಂ ಸಮ್ಮುಖದಲ್ಲಿ ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp