social_icon

ಎಚ್‌3ಎನ್‌2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್‌3ಎನ್‌2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

Published: 15th March 2023 01:38 PM  |   Last Updated: 15th March 2023 08:29 PM   |  A+A-


Representative Image

ಪ್ರಾತಿನಿಧಿಕ ಚಿತ್ರ

Posted By : Ramyashree GN
Source : PTI

ಪುದುಚೇರಿ: ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್‌3ಎನ್‌2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

ಕೇಂದ್ರಾಡಳಿತ ಪ್ರದೇಶದ ಪುದುಚೇರಿ, ಕಾರೈಕಲ್, ಮಾಹೆ ಮತ್ತು ಯಾನಂನ ಎಲ್ಲಾ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ವಿಶೇಷವಾಗಿ ಮಕ್ಕಳಲ್ಲಿ ವೈರಸ್ ಹರಡುವಿಕೆಯ ದೃಷ್ಟಿಯಿಂದ ಈ ಆದೇಶವು ಜಾರಿಯಲ್ಲಿರುತ್ತದೆ.

ಶೂನ್ಯವೇಳೆಯಲ್ಲಿ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಮತ್ತು ಶಿಕ್ಷಣ ಸಚಿವ ಎ. ನಮ್ಮಶಿವಾಯಂ, 'ವಿಶೇಷವಾಗಿ ಮಕ್ಕಳಲ್ಲಿ ಜ್ವರ ಹರಡುವ ಹಿನ್ನೆಲೆಯಲ್ಲಿ, ಖಾಸಗಿ-ನಿರ್ವಹಣೆಯ ಸಂಸ್ಥೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳು ಸೇರಿದಂತೆ ಪ್ರಾಥಮಿಕ ತರಗತಿಯಿಂದ 8ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲು ಸರ್ಕಾರ ನಿರ್ಧರಿಸಿದೆ' ಎಂದರು. 

ಇದನ್ನೂ ಓದಿ: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 117 ದಿನಗಳ ಬಳಿಕ 600ಕ್ಕೂ ಅಧಿಕ ಪ್ರಕರಣ, ಐವರು ಸಾವು

ಮಾರ್ಚ್ 11 ರಂದು ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಪುದುಚೇರಿಯಲ್ಲಿ ಮಾರ್ಚ್ 4 ರವರೆಗೆ ವೈರಲ್ ಎಚ್‌3ಎನ್2 ಉಪ ಪ್ರಕಾರಕ್ಕೆ ಸೇರಿದ 79 ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿಕೆ ನೀಡಿತ್ತು.

ಅಮೆರಿಕ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ ಸಂಸ್ಥೆ (ಸಿಡಿಸಿ) ಪ್ರಕಾರ,  ಎಚ್ 3 ಎನ್ 2  ಸಾಮಾನ್ಯವಾಗಿ ಹಂದಿಗಳಲ್ಲಿ ಹರಡುತ್ತದೆ ಮತ್ತು ಮನುಷ್ಯರಿಗೆ ಸೋಂಕು ತಗುಲುತ್ತದೆ. ಕೆಮ್ಮು, ಜ್ವರ, ನೋವು, ವಾಕರಿಕೆ, ವಾಂತಿ ಅಥವಾ ಅತಿಸಾರ ರೋಗಲಕ್ಷಣಗಳಿವೆ. ಇದು ಋತುಮಾನಕ್ಕೆ ಅನುಗುಣವಾಗಿ ಕಾಣಿಸಿಕೊಳ್ಳುವ ಇನ್‌ಫ್ಲುಯೆಂಜಾ ಸೋಂಕು. 


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp