ರಾಹುಲ್ ಗಾಂಧಿ ಕ್ಷಮೆ ಕೇಳಲು ಏನು ತಪ್ಪು ಮಾತನಾಡಿದ್ದಾರೆ, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಅಷ್ಟೆ: ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿಯವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾತ್ರ ಮಾತನಾಡಿದ್ದಾರೆ. ವಿಷಯ ಮಂಡನೆ ಮಾಡುವಾಗ ಜನರು ತಮ್ಮ ಅಭಿಪ್ರಾಯ ಹೇಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ರಾಹುಲ್ ಗಾಂಧಿಯವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾತ್ರ ಮಾತನಾಡಿದ್ದಾರೆ. ವಿಷಯ ಮಂಡನೆ ಮಾಡುವಾಗ ಜನರು ತಮ್ಮ ಅಭಿಪ್ರಾಯ ಹೇಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇಂಗ್ಲೆಂಡಿನಲ್ಲಿ ಸಾರ್ವಜನಿಕ ಭಾಷಣ ಮಾಡುವಾಗ ರಾಹುಲ್ ಗಾಂಧಿಯವರು ಭಾರತ ದೇಶದ ಬಗ್ಗೆ ಅವಹೇಳನ ಮಾಡಿದ್ದಾರೆ, ದೇಶಕ್ಕೆ ಅಪಮಾನ ಮಾಡಿದ್ದಾರೆ, ದೇಶದ ಮುಂದೆ ಅವರು ಕ್ಷಮೆಯಾಚಿಸಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಒತ್ತಾಯಿಸುತ್ತಿರುವ ಕುರಿತಂತೆ ಅಭಿಪ್ರಾಯ ಕೇಳಿದಾಗ ಎಎನ್ ಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೀಗೆ ಹೇಳಿದ್ದಾರೆ. 

ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತಿರುವವರಲ್ಲಿ ನಾನು ಒಂದು ಮಾತು ಕೇಳುತ್ತೇನೆ, ಪ್ರಧಾನಿ ಮೋದಿಯವರು 5-6 ದೇಶಗಳಿಗೆ ಹೋಗಿ ಅಲ್ಲಿ ಮಾತನಾಡುವಾಗ ನಮ್ಮ ದೇಶದ ಜನರನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ಹುಟ್ಟುವುದು ಪಾಪ, ಅಪರಾಧ ಎಂದು ಹೇಳಿದ್ದಾರೆ. ಹಾಗಿದ್ದರೆ ಅವರು ಮಾಡಿದ್ದು ಅಪಮಾನವಲ್ಲವೇ, ಅವರೇಕೆ ಕ್ಷಮೆ ಕೇಳಲಿಲ್ಲ ಎಂದು ಪ್ರಶ್ನಿಸಿದರು. 

ರಾಹುಲ್ ಗಾಂಧಿಯವರ ಮಾತುಗಳನ್ನು ಆಕ್ಷೇಪಿಸುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸತ್ಯ ಮಾತನಾಡುವವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಇಂತಹ ವಾತಾವರಣ ಪ್ರಜಾಪ್ರಭುತ್ವಕ್ಕೆ ಮಾರಕವಲ್ಲವೇ ಎಂದು ಕೇಳಿದರು.

ಹೀಗಾಗಿ ರಾಹುಲ್ ಗಾಂಧಿಯವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಪ್ರಧಾನ ಮಂತ್ರಿಗಳು ಅನೇಕ ದೇಶಗಳಿಗೆ ಹೋಗಿ ಇಲ್ಲಿನ ಜನರ ಸಂಸ್ಕೃತಿ ಮತ್ತು ಮಾನವೀಯತೆಯನ್ನು ಅವಮಾನಿಸಿದ್ದೀರಿ ಎಂದು ನಾವು ಹೇಳುತ್ತೇವೆ. ರಾಹುಲ್ ಗಾಂಧಿ ಕೇವಲ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದ್ದಾರೆ. ಜನರು ಚರ್ಚೆಗೆ ಹೋದಾಗ, ಅವರು ತಮ್ಮ ಅಭಿಪ್ರಾಯಗಳನ್ನು ಮಂಡಿಸುವುದು ಸಹಜ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com