ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಮುಗಿದ ನಂತರ ಈ ತಿಂಗಳಾಂತ್ಯದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಅವರ ಆಪ್ತರು ಬುಧವಾರ ತಿಳಿಸಿದ್ದಾರೆ.
ಮಾರ್ಚ್ 25 ರಂದು ಬಜೆಟ್ ಅಧಿವೇಶನ ಮುಗಿದ ನಂತರ ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸಲು ಶಿಂಧೆ ಅಯೋಧ್ಯೆಗೆ ತೆರಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಕ್ಕೂ ಕೆಲವೇ ದಿನಗಳ ಮುನ್ನ, ಜೂನ್ 2022 ರ ಮಧ್ಯಭಾಗದಲ್ಲಿ ಆಗಿನ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯ ಠಾಕ್ರೆ ಅವರೊಂದಿಗೆ ಏಕನಾಥ್ ಶಿಂಧೆ ಅವರು ಅಯೋಧ್ಯೆಗೆ ಭೇಟಿ ನೀಡಿದ್ದರು.
Advertisement