social_icon

ಚೆನ್ನೈ: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಚಿನ್ನಾಭರಣ ಕಳವು, ದೂರು ದಾಖಲು

ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಹಿರಿಯ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್‌ ನಿಂದ ಚಿನ್ನಾಭರಣ ಕಳವು ಆಗಿರುವ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published: 20th March 2023 12:36 PM  |   Last Updated: 20th March 2023 06:58 PM   |  A+A-


Aishwarya Rajinikanth

ಐಶ್ವರ್ಯ ರಜನಿಕಾಂತ್

Posted By : Shilpa D
Source : Online Desk

ಚೆನ್ನೈ: ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಹಿರಿಯ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್‌ ನಿಂದ ಚಿನ್ನಾಭರಣ ಕಳವು ಆಗಿರುವ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2019 ರಲ್ಲಿ ಸಹೋದರಿ ಸೌಂದರ್ಯ ಅವರ ಮದುವೆಗೆಂದು ಬಳಸಿದ್ದ ಸುಮಾರು 3.60 ಲಕ್ಷ ರೂ. ಮೌಲ್ಯದ 60 ಪವನ್‌ ಚಿನ್ನಾಭರಣ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸ ಮಾಡುವ ಕೆಲಸಗಾರರು ಕಳ್ಳತನ ಮಾಡಿರಬಹುದು ಎಂದು ಐಶ್ವರ್ಯಾ ರಜನಿಕಾಂತ್ ನೀಡಿರುವ ದೂರಿನಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ದೂರಿನ ಮೇರೆಗೆ ತೇನಂಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ನಮೂದಿಸಿರುವ ಕದ್ದ ಚಿನ್ನಾಭರಣಗಳ ಅಂದಾಜು ಮೌಲ್ಯ 3.6 ಲಕ್ಷ ರೂ.ಗಳಾಗಿದೆ.  ಲಾಕರ್ ಐಶ್ವರ್ಯಾ ಅವರ ಬಳಿ ಇದ್ದರೂ ಅದನ್ನು ಹಲವು ಬಾರಿ ಸ್ಥಳಾಂತರಿಸಲಾಗಿದೆ.

ಏಪ್ರಿಲ್ 9, 2022 ರಂದು, ಲಾಕರ್ ನಟ ರಜನಿಕಾಂತ್ ಅವರ ಬೋಯಸ್ ಗಾರ್ಡನ್ ನಿವಾಸಕ್ಕೆ ಸ್ಥಳಾಂತರಗೊಂಡಿತು. ಲಾಕರ್‌ನ ಕೀಲಿಗಳನ್ನು ಸೇಂಟ್ ಮೇರಿಸ್ ರಸ್ತೆಯ ಫ್ಲಾಟ್‌ನಲ್ಲಿರುವ ನನ್ನ ವೈಯಕ್ತಿಕ ಕಬ್ಬಿಣದ ಕಪಾಟಿನಲ್ಲಿ ಇರಿಸಲಾಗಿತ್ತು ಎಂದು ಐಶ್ವರ್ಯ ಹೇಳಿದ್ದಾರೆ.

ನನ್ನ ಸಿಬ್ಬಂದಿಗೆ ಇದು ತಿಳಿದಿದೆ. ನನ್ನ ಅನುಪಸ್ಥಿತಿಯಲ್ಲಿ ಅವರು ಆಗಾಗ್ಗೆ ಅಪಾರ್ಟ್ಮೆಂಟ್‌ಗೆ ಭೇಟಿ ನೀಡುತ್ತಾರೆ ಎಂದು ಐಶ್ವರ್ಯಾ ರಜನಿಕಾಂತ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಫೆಬ್ರವರಿ 10 ರಂದು ಲಾಕರ್ ಅನ್ನು ಪರಿಶೀಲಿಸಿದಾಗ, ತನ್ನ ಮದುವೆಯಲ್ಲಿ ಖರೀದಿಸಿದ್ದ ಆಭರಣಗಳು ಕಾಣೆಯಾಗಿವೆ ಎಂದು ಐಶ್ವರ್ಯಾ ಹೇಳಿದರು. ಆಕೆಯ ದೂರಿನ ಆಧಾರದ ಮೇಲೆ ತೇನಂಪೇಟೆ ಪೊಲೀಸರು ಐಪಿಸಿ ಸೆಕ್ಷನ್ 381 (ಮನೆಕೆಲಸಗಾರರಿಂದ ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp