social_icon

ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೆಡೆ ಸೇರುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಒಟ್ಟಾಗಿ ಬರುತ್ತಿವೆ ಎಂದು ಮಂಗಳವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳು ಆರೋಪಗಳಿಂದ ಅಡ್ಡಿಯಾಗದಂತೆ ಭ್ರಷ್ಟಾಚಾರ ಮಟ್ಟಹಾಕುವುದು ಮುಂದುವರೆಯಲಿದೆ ಎಂದು ಹೇಳಿದ್ದಾರೆ.

Published: 28th March 2023 11:39 PM  |   Last Updated: 29th March 2023 07:53 PM   |  A+A-


PM_Modi1

ಪ್ರಧಾನಿ ಮೋದಿ

Posted By : Nagaraja AB
Source : The New Indian Express

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಒಟ್ಟಾಗಿ ಬರುತ್ತಿವೆ ಎಂದು ಮಂಗಳವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳು ಆರೋಪಗಳಿಂದ ಅಡ್ಡಿಯಾಗದಂತೆ ಭ್ರಷ್ಟಾಚಾರ ಮಟ್ಟಹಾಕುವುದು ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ವಿಸ್ತರಿತ ಬಿಜೆಪಿ ಪ್ರಧಾನ ಕಚೇರಿ ಉದ್ಘಾಟಿಸಿದ ನಂತರ ಮಾತನಾಡಿದ ಮೋದಿ, ಭಾರತದ ಶಕ್ತಿಯು ಹೊಸ ಎತ್ತರಕ್ಕೆ ಏರುತ್ತಿರುವ ಸಮಯದಲ್ಲಿ, ದೇಶದ ಒಳಗೆ ಮತ್ತು ಹೊರಗೆ  ಭಾರತ ವಿರೋಧಿ ಶಕ್ತಿಗಳು ಕೈಜೋಡಿಸುವುದು ಸಹಜ ಎಂದರು. 

ಕೆಲವು ಪಕ್ಷಗಳು ಭ್ರಷ್ಟಾಚಾರಿ ಬಚಾವೋ ಅಭಿಯಾನ( ಭ್ರಷ್ಟಾಚಾರ ಉಳಿಸಿ ಅಭಿಯಾನ) ಪ್ರಾರಂಭಿಸಿವೆ ಎಂದು ಹೇಳುವ ಮೂಲಕ ಇಡಿಯಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. 

#WATCH | Country can progress only when corruption will be stopped. When we will do so much, then some people will be upset and will be angry but the action against corruption won't be stopped because of their (Opposition) false allegations: PM Modi pic.twitter.com/6qDE7KJ6JX

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಗೆ ಅನರ್ಹಗೊಳಿಸಿರುವುದು ಕೂಡ ಪ್ರತಿಪಕ್ಷಗಳಿಗೆ ರ‍್ಯಾಲಿಯ ವಿಷಯವಾಗಿ ಪರಿಣಮಿಸಿದೆ. ಸುಳ್ಳು ಆರೋಪಗಳಿಂದ ದೇಶ ಬಗ್ಗುವುದಿಲ್ಲ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ನಿಲ್ಲುವುದಿಲ್ಲ ಎಂದು ಮೋದಿ ಹೇಳಿದರು.

ಭಾರತ ವಿರೋಧಿ ಶಕ್ತಿಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿವೆ. ದೇಶದ ಬೆಳವಣಿಗೆಯನ್ನು ತಡೆಯಲು, ಅದರ ಅಡಿಪಾಯದ ಮೇಲೆ ದಾಳಿ ಮಾಡುತ್ತಿದ್ದಾರೆ ಮತ್ತು ನ್ಯಾಯಾಂಗ ಮತ್ತು ತನಿಖಾ ಸಂಸ್ಥೆಗಳಂತಹ ಸಂಸ್ಥೆಗಳನ್ನು ದೂಷಿಸುವ ಮತ್ತು ಅವರ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪಿತೂರಿಗಳಲ್ಲಿ ತೊಡಗಿದ್ದಾರೆ ಎಂದು ಅವರು ಆರೋಪಿಸಿದರು. 

ಇದನ್ನೂ ಓದಿ: ಅದಾನಿ ವಿವಾದ, ರಾಹುಲ್ ಗಾಂಧಿ ಅನರ್ಹತೆ: ವಿಪಕ್ಷಗಳಿಂದ ಒಗ್ಗಟ್ಟು ಪ್ರದರ್ಶನ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾ ಮೆರವಣಿಗೆ

ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿರುವಾಗ ಅವರನ್ನು ಗುರಿಯಾಗಿಸಲಾಗುತ್ತದೆ ಮತ್ತು ನ್ಯಾಯಾಲಯಗಳು ಈ ಶಕ್ತಿಗಳಿಗೆ ಇಷ್ಟವಾಗದ ತೀರ್ಪು ನೀಡಿದಾಗ ಅವರನ್ನು ಪ್ರಶ್ನಿಸಲಾಗುತ್ತದೆ. ಭ್ರಷ್ಟಾಚಾರದ ವಿರುದ್ಧ ನಾವು ಇಷ್ಟೆಲ್ಲಾ ಕ್ರಮಕೈಗೊಳ್ಳುವಾಗ ಕೆಲವರು ಕೋಪಗೊಳ್ಳುವುದು ನಿಶ್ಚಿತ ಎಂದರು.


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp