ಸ್ಥಳೀಯ ಪೊಲೀಸರ ಕಿರುಕುಳ; ಅಯೋಧ್ಯೆ ದೇವಸ್ಥಾನದ ಅರ್ಚಕ ಆತ್ಮಹತ್ಯೆ

ಅಯೋಧ್ಯೆಯ ದೇವಸ್ಥಾನದ ಅರ್ಚಕರೊಬ್ಬರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಯೋಧ್ಯೆ: ಅಯೋಧ್ಯೆಯ ದೇವಸ್ಥಾನದ ಅರ್ಚಕರೊಬ್ಬರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಶವ ಪತ್ತೆಯಾಗಿದೆ. ಸಂತ್ರಸ್ತರನ್ನು ಅಯೋಧ್ಯೆಯ ನರಸಿಂಹ ದೇಗುಲದ ರಾಮ್ ಶಂಕರ್ ದಾಸ್ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆರೋಪಿಸಿರುವ ವಿಡಿಯೋ ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕೆಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇದೇ ದೇವಸ್ಥಾನದ ಮುಖ್ಯ ಅರ್ಚಕರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಸ್ ವಿರುದ್ಧ ಸ್ಥಳೀಯ ಪೊಲೀಸರು ಕೆಲವು ದಿನಗಳ ಹಿಂದೆ ಪ್ರಕರಣ ದಾಖಲಿಸಿದ್ದರು.

ಅಯೋಧ್ಯೆಯ ಕೊತ್ವಾಲಿ ಎಸ್‌ಎಚ್‌ಒ ಮನೋಜ್ ಶರ್ಮಾ, 'ಅರ್ಚಕರು ಮಾದಕ ವ್ಯಸನಿಯಾಗಿದ್ದು, ಮಾದಕ ವ್ಯಸನದ ಅಮಲಿನಲ್ಲಿ ತನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಪೊಲೀಸರ ವಿರುದ್ಧ ಮಾಡಿದ ಆರೋಪಗಳು ಸಂಪೂರ್ಣವಾಗಿ ಸುಳ್ಳು, ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ' ಎಂದು ಹೇಳಿದರು.

ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com