ಮಾಜಿ ಸಿಜೆಐ ರಂಜನ್‌ ಗೊಗೊಯ್, ಪ್ರಕಾಶಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಂಜನ್ ಗೊಗೊಯ್
ರಂಜನ್ ಗೊಗೊಯ್

ಗುವಾಹಟಿ: ರಾಜ್ಯಸಭಾ ಸಂಸದ ಮತ್ತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಗೊಗೊಯ್ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಶರ್ಮಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಮತ್ತು ಅವರ ಆತ್ಮಚರಿತ್ರೆ 'ಜಸ್ಟೀಸ್ ಫಾರ್ ಎ ಜಡ್ಜ್' ಪುಸ್ತಕದಲ್ಲಿ ತಮ್ಮ ವಿರುದ್ಧ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.

ಗೊಗೊಯ್ ಮತ್ತು ಅವರ ಪ್ರಕಾಶಕರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಮುಂದೆ ಪ್ರಕಟಿಸುವುದು, ವಿತರಿಸುವುದು ಅಥವಾ ಮಾರಾಟ ಮಾಡುವುದನ್ನು ತಡೆಯುವ ಮಧ್ಯಂತರ ತಡೆಯಾಜ್ಞೆಯನ್ನು ಕೋರಿ ಅವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಇಲ್ಲಿನ ಕಾಮ್ರೂಪ್ ಮೆಟ್ರೋ ಜಿಲ್ಲಾ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಮತ್ತು ತಡೆಯಾಜ್ಞೆಗೆ ಅರ್ಜಿ ಸಲ್ಲಿಸಲಾಗಿದೆ.

ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯವು, ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಬುಧವಾರದ ತನ್ನ ತೀರ್ಪಿನಲ್ಲಿ 'ಕಾನೂನು ಮತ್ತು ತೀರ್ಪು ನೀಡಬೇಕಾದ ಸಂಗತಿಗಳೆರಡರಲ್ಲೂ ಗಣನೀಯ ಪ್ರಶ್ನೆ ಇದೆ' ಎಂದು ಕಂಡುಬಂದಿದೆ ಎಂದು ಹೇಳಿದೆ.

ಅರ್ಜಿದಾರರು ಮತ್ತು ಪ್ರತಿವಾದಿಗಳಿಬ್ಬರಿಗೂ ಸಮನ್ಸ್ ಜಾರಿಗೊಳಿಸಲು ಸೂಚಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com