ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಯವರ ಸೋಲು: ಜೈರಾಮ್ ರಮೇಶ್

ಕರ್ನಾಟಕದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದರ್ಥ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಜೈರಾಮ್ ರಮೇಶ್
ಜೈರಾಮ್ ರಮೇಶ್

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದರ್ಥ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಷ್ಟು ಪ್ರಚಾರ ನಡೆಸಿದವರು ಯಾರೂ ಇಲ್ಲ. ಪ್ರಧಾನಿ ಮೋದಿ ರೋಡ್ ಶೋ ನಡೆಸಿದರು, ಅನೇಕ ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಅಮಿತ್ ಶಾ, ಯೋಗಿ ಆದಿತ್ಯನಾಥ್ ಹೆಚ್ಚಿನ ಪ್ರಚಾರಕ್ಕೆ ಹೋಗಿರಲಿಲ್ಲ ಎಂದರು. 

ಬಿಜೆಪಿ ಕರ್ನಾಟಕದಲ್ಲಿ ಸೋತರೆ 2024ರಲ್ಲಿ ದೆಹಲಿ ಬಾಗಿಲು ಕಾಂಗ್ರೆಸ್ ಗೆ ತೆರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com