ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮತ್ತು ಫೇಲ್ ಆದ ಕಾರಣ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವರದಿಯಾದ ಪ್ರಕರಣಗಳಲ್ಲಿ, ಹೈದರಾಬಾದ್ನ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದರೆ, ಉಳಿದ ಘಟನೆಗಳನ್ನು ಸಂಗಾರೆಡ್ಡಿಯ ಬಿಡಿಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ವನಪರ್ತಿಯ ಕೊತಕೋಟಾ ಮತ್ತು ಜಗ್ತಿಯಾಲ್ ಜಿಲ್ಲೆಯ ಮೆಡಿಪಲ್ಲಿಯಲ್ಲಿ ದಾಖಲಾಗಿವೆ.
ಮೊದಲ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ಶಾಂತಿ ಕುಮಾರಿ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎರಡನೇ ವರ್ಷದ ವಿದ್ಯಾರ್ಥಿನಿ ಹಾಗೂ ಪುಂಜಗುಟ್ಟ ನಿವಾಸಿ ಅಂಬಟಿ ಹರಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
Advertisement