ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ, ದೆಹಲಿ ಪೊಲೀಸರಿಂದ ತನಿಖೆ

ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ದೆಹಲಿಯ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಈ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Updated on

ನವದೆಹಲಿ: ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ದೆಹಲಿಯ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಈ ಕುರಿತು ದೆಹಲಿ ಪೊಲೀಸರಿಗೆ ಸಚಿವರ ಕಚೇರಿ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಸಚಿವರ ಸಿಬ್ಬಂದಿಯಿಂದಲೇ ಕೊಲೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಸದ್ಯಕ್ಕೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನಿತಿನ್ ಗಡ್ಕರಿ ಅವರ ಕಚೇರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವುದು ಈ ವರ್ಷದಲ್ಲಿ ಇದು ಎರಡನೇ ಬಾರಿ. ಜನವರಿಯಲ್ಲಿ ಮಹಾರಾಷ್ಟ್ರದ ಅವರ ನಿವಾಸ ಮತ್ತು ಕಚೇರಿಗೆ ಇಂತಹ ಕರೆಗಳು ಬಂದಿದ್ದು, ಕರೆ ಮಾಡಿದವರನ್ನು ಕರ್ನಾಟಕದ ಬೆಳಗಾವಿ ಜೈಲಿನಲ್ಲಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ ಎಂದು ನಾಗ್ಪುರ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೈಲಿನಿಂದಲೇ ಬೆದರಿಕೆ ಹಾಕಲಾಗುತ್ತಿದೆ. ಕರೆ ಮಾಡಿದವರು ಕುಖ್ಯಾತ ದರೋಡೆಕೋರ ಮತ್ತು ಕೊಲೆ ಆರೋಪಿ ಜಯೇಶ್ ಕಾಂತ ಬೆಳಗಾವಿ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಜೈಲಿನೊಳಗೆ ಅಕ್ರಮವಾಗಿ ಫೋನ್ ಬಳಸಿ ಗಡ್ಕರಿ ಕಚೇರಿಗೆ ಬೆದರಿಕೆ ಹಾಕಿದ್ದಾರೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದ್ದಾರೆ.

ನಿತಿನ್ ಗಡ್ಕರಿ ಅವರು ಭಾರತದ ರಸ್ತೆ ಮೂಲಸೌಕರ್ಯದಲ್ಲಿ ತಮ್ಮ ಪರಿವರ್ತನೆಯ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆ ಮತ್ತು ವಿನಮ್ರ ರಾಜಕಾರಣಿ ಎಂಬ ಖ್ಯಾತಿಯನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com