ಕೇರಳ: ಗೋದಾಮಿನಲ್ಲಿ ಬೆಂಕಿ ಅವಘಡ, 8 ಕೋಟಿ ರೂ. ಮೌಲ್ಯದ ಔಷಧಗಳು ನಾಶ

ಕೇರಳದ  ಕೊಲ್ಲಂ ಜಿಲ್ಲೆಯ ವೈದ್ಯಕೀಯ ಸೇವಾ ನಿಗಮ ನಿಯಮಿತದ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಔಷಧಗಳು ಮತ್ತು ಸಾಮಗ್ರಿಗಳು ನಾಶವಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಲ್ಲಂ: ಕೇರಳದ  ಕೊಲ್ಲಂ ಜಿಲ್ಲೆಯ ವೈದ್ಯಕೀಯ ಸೇವಾ ನಿಗಮ ನಿಯಮಿತದ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಔಷಧಗಳು ಮತ್ತು ಸಾಮಗ್ರಿಗಳು ನಾಶವಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ.

ಕೊಲ್ಲಂನಲ್ಲಿರುವ ಕೆಎಂಎಸ್‌ಸಿಎಲ್‌ನ ಜಿಲ್ಲಾ ಔಷಧ ಗೋದಾಮಿನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಇದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿ  ಪೂರೈಕೆಯ ಪ್ರಮುಖ ಕೇಂದ್ರವಾಗಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. "ಬೆಂಕಿಯಿಂದ ಒಟ್ಟು 8 ಕೋಟಿ ನಷ್ಟ ಅಂದಾಜಿಸಲಾಗಿದೆ. ಆದರೆ ಔಷಧಿಗಳಿಗೆ ವಿಮೆ ಮಾಡಿರುವುದರಿಂದ ನಿಗಮಕ್ಕೆ ಹೆಚ್ಚು ನಷ್ಟ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com