ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ

2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ. 
ಪಿ ಚಿದಂಬಂರಂ
ಪಿ ಚಿದಂಬಂರಂ
Updated on

ನವದೆಹಲಿ: 2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ. 

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ ಮತ್ತು ಆರ್‌ಬಿಐಗೆ 500 ರೂ ನೋಟನ್ನು ಮರು ಪರಿಚಯಿಸಲು ಒತ್ತಡ ಉಂಟಾಯಿತು ಮತ್ತು ಕೇಂದ್ರವು ಮತ್ತೆ 1,000 ರೂ. ನೋಟನ್ನು ಮರು ಪರಿಚಯಿಸಿದರೆ ಆಶ್ಚರ್ಯವಿಲ್ಲ ಎಂದು ಮಾಜಿ ಕೇಂದ್ರ ಹಣಕಾಸು ಸಚಿವರು ಹೇಳಿದರು.

ಅಚ್ಚರಿಯ ಕ್ರಮದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ 2,000 ರೂಪಾಯಿ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಸಾರ್ವಜನಿಕರು ಆ ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ರವರೆಗೆ ಸಮಯವನ್ನು ನೀಡಿದೆ.

ಮೇ 23 ರಿಂದ ಸೆಪ್ಟೆಂಬರ್ 30ರ ವರೆಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ. ಅಲ್ಲದೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ವಿತರಿಸದಂತೆ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ. 

ಚಿದಂಬರಂ ಟ್ವೀಟ್‌ ಮಾಡಿದ್ದು, 'ನಿರೀಕ್ಷೆಯಂತೆ, ಸರ್ಕಾರ/ಆರ್‌ಬಿಐ 2,000 ರೂಪಾಯಿ ನೋಟನ್ನು ಹಿಂತೆಗೆದುಕೊಂಡಿದೆ ಮತ್ತು ನೋಟುಗಳನ್ನು ಬದಲಾಯಿಸಲು ಸೆಪ್ಟೆಂಬರ್ 30ರವರೆಗೆ ಸಮಯ ನೀಡಿದೆ. 2,000 ರೂ. ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ ಮತ್ತು ಇದೀಗ ನಾವು ಹೇಳಿದ್ದು ಸರಿ ಎಂದು ಸಾಬೀತಾಗಿದೆ. 500 ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2,000 ರೂಪಾಯಿ ನೋಟನ್ನು ಚಲಾವಣೆಯಿಂದ ಹಿಂಪಡೆಯಲಾಗಿದೆ' ಎಂದಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ ಮತ್ತು ಆರ್‌ಬಿಐ ಮೇಲೆ 500 ಮತ್ತು 1000 ರೂ. ನೋಟನ್ನು ಮರು ಪರಿಚಯಿಸಲು ಒತ್ತಡ ಹೇರಲಾಯಿತು ಎಂದು ಚಿದಂಬರಂ ಹೇಳಿದರು.

'ಸರ್ಕಾರ/ಆರ್‌ಬಿಐ 1,000 ರೂ. ನೋಟನ್ನು ಮರು ಪರಿಚಯಿಸಿದರೆ ನನಗೆ ಆಶ್ಚರ್ಯವಾಗುವುದಿಲ್ಲ. ನೋಟು ಅಮಾನ್ಯೀಕರಣವು ಪೂರ್ಣ ವಲಯಕ್ಕೆ ಬಂದಿದೆ!' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com