ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್, ಸಂಸದ ಸಂಜಯ್ ಸಿಂಗ್ ಗೆ ಸಮನ್ಸ್ ಜಾರಿ!
ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ನ ಅಹಮದಾಬಾದ್ನ ನ್ಯಾಯಾಲಯ...
Published: 23rd May 2023 06:57 PM | Last Updated: 23rd May 2023 06:57 PM | A+A A-

ದೆಹಲಿ ಸಿಎಂ ಕೇಜ್ರಿವಾಲ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ನ ಅಹಮದಾಬಾದ್ನ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಇದರಲ್ಲಿ ಇಬ್ಬರಿಗೂ ಜೂನ್ 7ರಂದು ಹಾಜರಾಗುವಂತೆ ಸೂಚಿಸಲಾಗಿದೆ.
ಮೇ 23ರಂದು ತಮ್ಮ ಮುಂದೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಜೆ.ಪಾಂಚಾಲ್ ಅವರು ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಪ್ರಧಾನಿ ಮೋದಿಯವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ 'ವ್ಯಂಗ್ಯ' ಮತ್ತು 'ಅವಹೇಳನಕಾರಿ' ಹೇಳಿಕೆಗಳಿಗಾಗಿ ಗುಜರಾತ್ ವಿಶ್ವವಿದ್ಯಾನಿಲಯದ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರಿಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವುದನ್ನು ಗಮನಿಸಬಹುದು.
ಇದನ್ನೂ ಓದಿ: ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾ
ಎಎಪಿಯ ಗುಜರಾತ್ ಘಟಕದ ಕಾನೂನು ವಿಭಾಗದ ಮುಖ್ಯಸ್ಥ ಪ್ರಣಬ್ ಠಕ್ಕರ್ ಅವರು ಸೋಮವಾರ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ನ್ಯಾಯಾಲಯ ನೀಡಿದ ಸಮನ್ಸ್ಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.
ಗುಜರಾತ್ ವಿಶ್ವವಿದ್ಯಾನಿಲಯದ ವಕೀಲರು ಮಂಗಳವಾರ ಈ ವಿಷಯದ ಬಗ್ಗೆ ಹೊಸ ನ್ಯಾಯಾಧೀಶ ಎಸ್ಜೆ ಪಾಂಚಾಲ್ ಅವರಿಗೆ ಮಾಹಿತಿ ನೀಡಿದರು ಮತ್ತು ಅವರ ಹಿಂದಿನವರು ಆರೋಪಿಗಳಿಗೆ ಮೇ 23ರಂದು ನ್ಯಾಯಾಲಯಕ್ಕೆ ಹಾಜರಾಗಲು ಏಪ್ರಿಲ್ 15ರಂದು ನೋಟಿಸ್ ನೀಡಿದ್ದರು ಎಂದು ಹೇಳಿದರು. ನ್ಯಾಯಾಲಯಕ್ಕೆ ಯಾರೂ ಹಾಜರಾಗದ ಕಾರಣ, ಅವರು ಸಮನ್ಸ್ ಸ್ವೀಕರಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ.
ಇದನ್ನು ನೋಡುವಂತೆ ನ್ಯಾಯಾಧೀಶರು ಸಿಬ್ಬಂದಿಗೆ ಸೂಚಿಸಿದರು. ನಂತರ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ನೀಡುವಂತೆ ಸೂಚಿಸಿದರು.