ಹೊಸ ಸಂಸತ್ತು ಕಟ್ಟಡ ರಾಷ್ಟ್ರಪತಿಗಳಿಂದ ಉದ್ಘಾಟಿಸಬೇಕೆಂದು ಕೋರಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆ ಸೆಕ್ರೆಟರಿಯೇಟ್ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
Published: 26th May 2023 01:39 PM | Last Updated: 26th May 2023 01:43 PM | A+A A-

ನೂತನ ಸಂಸತ್ತು ಭವನ, ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆ ಸೆಕ್ರೆಟರಿಯೇಟ್ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಪಿಎಸ್ ನರಸಿಂಹ ಅವರ ಪೀಠವು ಅರ್ಜಿದಾರರ ವೈಯಕ್ತಿಕ ವಕೀಲ ಜಯ ಸುಕಿನ್ ಅವರಿಗೆ ಈ ಅರ್ಜಿಯನ್ನು ಏಕೆ ಮತ್ತು ಹೇಗೆ ಸಲ್ಲಿಸಲಾಗಿದೆ ಎಂಬುದನ್ನು ನ್ಯಾಯಾಲಯವು ಅರ್ಥಮಾಡಿಕೊಂಡಿದೆ. ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸುಕಿನ್ ಅವರು ಆರ್ಟಿಕಲ್ 79 ರ ಅಡಿಯಲ್ಲಿ, ರಾಷ್ಟ್ರಪತಿಗಳು ದೇಶದ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿದ್ದಾರೆ. ಅವರನ್ನು ಆಹ್ವಾನಿಸಬೇಕಿತ್ತು. ಆದಾಗ್ಯೂ, ನ್ಯಾಯಾಲಯವು ಅರ್ಜಿಯನ್ನು ಪರಿಗಣಿಸಲು ಬಯಸದಿದ್ದರೆ, ಅದನ್ನು ಹಿಂಪಡೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದರು. ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿ ಹಿಂಪಡೆಯಲು ಅವಕಾಶ ನೀಡಿದರೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದರು.
ನಂತರ ಪೀಠವು ಅರ್ಜಿಯನ್ನು ಹಿಂಪಡೆದಿದೆ ಎಂದು ವಜಾಗೊಳಿಸಿತು. ಪ್ರತಿವಾದಿಗಳಾದ ಲೋಕಸಭೆ ಸೆಕ್ರೆಟರಿಯೇಟ್ ಮತ್ತು ಯೂನಿಯನ್ ಆಫ್ ಇಂಡಿಯಾ - ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಅವರನ್ನು "ಅವಮಾನಗೊಳಿಸುತ್ತಿದೆ" ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಲು ಉದ್ದೇಶಿಸಿರುವ ವಿವಾದದ ನಡುವೆ ಸುಪ್ರೀಂ ಕೋರ್ಟ್ ವಕೀಲರಿಂದ ಅರ್ಜಿ ಸಲ್ಲಿಸಲಾಗಿದೆ. ಇಪ್ಪತ್ತು ವಿರೋಧ ಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. 19 ರಾಜಕೀಯ ಪಕ್ಷಗಳು, "ಪ್ರಜಾಪ್ರಭುತ್ವದ ಆತ್ಮವು ಸಂಸತ್ತಿನಿಂದ ಹೊರಹಾಕಲ್ಪಟ್ಟಾಗ, ನಾವು ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯವನ್ನು ಕಾಣುವುದಿಲ್ಲ ಎಂದು ಹೇಳಿದೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿ ಮಾಡಿ ಹೊಸ ಕಟ್ಟಡವನ್ನು ಉದ್ಘಾಟಿಸುವಂತೆ ಆಹ್ವಾನಿಸಿದ್ದರು. ಮೋದಿ ಅವರು 2020 ರಲ್ಲಿ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೆಚ್ಚಿನ ವಿರೋಧ ಪಕ್ಷಗಳು ಆಗಲೂ ಕಾರ್ಯಕ್ರಮದಿಂದ ದೂರವೇ ಉಳಿದಿದ್ದವು.