ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ 12 ಮಂದಿ ಸಾವು; ಜನರಲ್ಲಿ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಎಗ್ರಾ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.

ಸ್ಫೋಟದ 11 ದಿನಗಳ ನಂತರ ಖಾಡಿಕುಲ್ ಗ್ರಾಮಕ್ಕೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ವರಿಷ್ಠರು, ಗುಪ್ತಚರ ವಿಭಾಗವು ಸರಿಯಾಗಿ ಕೆಲಸ ಮಾಡಿದ್ದರೆ, ಈ ಘಟನೆಯನ್ನು ತಪ್ಪಿಸಬಹುದಿತ್ತು ಎಂದು ಹೇಳಿದ್ದಾರೆ.

'ನಾನು ನಿಮಗೆ ತಲೆಬಾಗುತ್ತೇನೆ ಮತ್ತು ಘಟನೆಗೆ (ಮೇ 16ರಂದು ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ) ಕ್ಷಮೆಯಾಚಿಸುತ್ತೇನೆ. ಗುಪ್ತಚರ ವಿಭಾಗವು ಸರಿಯಾಗಿ ಕೆಲಸ ಮಾಡಿದ್ದರೆ, ಈ ಸ್ಫೋಟವನ್ನು ತಪ್ಪಿಸಬಹುದಿತ್ತು' ಎಂದು ಸ್ಫೋಟದಲ್ಲಿ ಸತ್ತವರು ಮತ್ತು ಗಾಯಗೊಂಡವರ ಸಂಬಂಧಿಕರಿಗೆ ಪರಿಹಾರದ ಚೆಕ್ ವಿತರಿಸಿದ ನಂತರ ಬ್ಯಾನರ್ಜಿ ಹೇಳಿದರು.

ಮೇ 16ರ ಸ್ಫೋಟದಲ್ಲಿ ಮೃತರಾದವರ ಕುಟುಂಬದ ತಲಾ ಒಬ್ಬ ಸದಸ್ಯರಿಗೆ 'ಗೃಹರಕ್ಷಕ' ದಳದ ನೇಮಕಾತಿ ಪತ್ರವನ್ನೂ ಅವರು ಹಸ್ತಾಂತರಿಸಿದರು.

ಅಕ್ರಮ ಕಾರ್ಖಾನೆಯ ಮಾಲೀಕರ ಕುಟುಂಬದ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ ಬ್ಯಾನರ್ಜಿ, ಅಂತಹ ಯಾವುದೇ ಘಟಕಗಳು ಕಾರ್ಯನಿರ್ವಹಿಸುತ್ತಿರುವುದನ್ನು ಕಂಡರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಗ್ರಾಮಸ್ಥರನ್ನು ಒತ್ತಾಯಿಸಿದರು.

ಬಂಗಾಳ ಸಿಎಂ ಜತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಎಚ್‌ಕೆ ದ್ವಿವೇದಿ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com