ನವದೆಹಲಿ: ನೂತನ ಸಂಸತ್ ಭವನ ಭಾರತೀಯ ಸಂಸ್ಕೃತಿ ಬಿಂಬಿಸುತ್ತದೆ. ಸಂಸತ್ ಭವನ ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರಲಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಭಾನುವಾರ ಹೇಳಿದ್ದಾರೆ.
ನೂತನ ಸಂಸತ್ ಭವನ ಉದ್ಘಾಟನೆ 2ನೇ ಹಂತದ ಕಾರ್ಯಕ್ರಮ ಆರಂಭವಾಗಿದ್ದು, ಕಾರ್ಯಕ್ರಮದಲ್ಲಿ ಉಪಸಭಾಪತಿ ಹರಿವಂಶ್ ಅವರು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಸಂದೇಶ ಓದಿದರು.
ನೂತನ ಸಂಸತ್ ಭವನ ಕಟ್ಟಡ ವಾಸ್ತು ಪ್ರಕಾರ ನಿರ್ಮಾಣವಾಗಿದೆ. ನೂತನ ಸಂಸತ್ ಭವನ ಭಾರತೀಯ ಸಂಸ್ಕೃತಿ ಬಿಂಬಿಸುತ್ತದೆ. ಸಂಸತ್ ಭವನ ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರಲಿದೆ ಎಂದು ಉಪ ರಾಷ್ಟ್ರಪತಿಯವರು ತಿಳಿಸಿದ್ದಾರೆಂದು ಹೇಳಿದರು.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಂದೇಶವನ್ನೂ ರಾಜ್ಯಸಭಾ ಉಪಸಭಾಪತಿ ಹರಿವಂಶ್ ಅವರು ಓದಿದರು.
ನೂತನ ಸಂಸತ್ ಭವನದ ಉದ್ಘಾಟನಾ ದಿನವನ್ನು ಭಾರತದ ಇತಿಹಾಸದಲ್ಲಿ ಸ್ವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ. ಈ ಸಂಸತ್ ಭವನ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಭಾರತದ ಸಂಸ್ಕೃತಿ ಅನಾವರಣ ಆಗಿದೆ ಎಂದು ಹೇಳಿದರು.
ಬಳಿಕ ಮಾತನಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, ಇಡೀ ದೇಶವೇ ಇಂದು ಈ ಕ್ಷಣಕ್ಕೆ ಸಾಕ್ಷಿಯಾಗಿದೆ. 2.5 ವರ್ಷಗಳಲ್ಲಿ ಈ ಹೊಸ ಸಂಸತ್ತನ್ನು ನಿರ್ಮಿಸಲಾಗಿದೆ. ಇದಕ್ಕೆ ಪ್ರಧಾನಿ ಮೋದಿಯವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆಂದು ಹೇಳಿದರು.
ಹೊಸ ಸಂಸತ್ ಭವನ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಾಕ್ಷಿ. ಭಾರತದ ಪ್ರಜಾಪ್ರಭುತ್ವದ ಪ್ರತೀಕ ಈ ನೂತನ ಸಂಸತ್ ಭವನ. ಸ್ವತಂತ್ರ್ಯದ ಅಮೃತ್ ಮಹೋತ್ಸವದಲ್ಲಿ ನೂತನ ಸಂಸತ್ ನಿರ್ಮಾಣವಾಗಿದೆ. ಸಾವಿರಾರು ಕಾರ್ಮಿಕರ ಬಲದಿಂದ ಈ ಸಂಸತ್ ಭವನ ನಿರ್ಮಾಣವಾಗಿದೆ. ಲೋಕಸಭೆಯಲ್ಲಿ ಸದಸ್ಯರ ಚರ್ಚೆಯಿಂದ ಅನೇಕ ಕಾನೂನು ನಿರ್ಮಿಸಲಾಗಿದೆ. ನೂತನ ಸಂಸತ್ ಭವನ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಗೆ ವೇದಿಕೆಯಾಗಿದೆ. ಸಂಸತ್ ಭವನ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವೇದಿಕೆಯಾಗಲಿದೆ ಎಂದು ತಿಳಿಸಿದರು.
Advertisement