ಈ ಗಳಿಗೆಯಲ್ಲಿ ನಾನು ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದ್ದೇನೆ: ಅಧಿಕಾರದಲ್ಲಿ 9 ವಸಂತಗಳನ್ನು ಪೂರೈಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷಗಳನ್ನು ಪೂರೈಸಿದೆ. ಕೇಂದ್ರದ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 
ಸಂಸತ್ತು ಭವನ ಹೊರಗೆ ಪ್ರಧಾನಿ ನರೇಂದ್ರ ಮೋದಿ
ಸಂಸತ್ತು ಭವನ ಹೊರಗೆ ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಇಂದು ಮೇ 30ಕ್ಕೆ 9 ವರ್ಷಗಳನ್ನು ಪೂರೈಸಿದೆ. ಕೇಂದ್ರದ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 

ರಾಷ್ಟ್ರದ ಸೇವೆಯಲ್ಲಿ 9 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ನಾನು ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದ್ದೇನೆ. ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರ, ತೆಗೆದುಕೊಳ್ಳುವ ಪ್ರತಿಯೊಂದು ಕ್ರಿಯೆಯು ಜನರ ಜೀವನವನ್ನು ಸುಧಾರಿಸುವ ಬಯಕೆಯಿಂದ ಮಾರ್ಗದರ್ಶಿಸಲ್ಪಟ್ಟಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಇನ್ನೂ ಹೆಚ್ಚು ಶ್ರಮಿಸುತ್ತೇವೆ.  #9YearsOfSeva" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

ಮೇ 30ಕ್ಕೆ ಮೋದಿ ಸರ್ಕಾರ ಅಧಿಕಾರದಲ್ಲಿ 9 ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸುವ ಬಗ್ಗೆ ಅಹಂಕಾರದ ಹೇಳಿಕೆಗಳನ್ನು ನೀಡುತ್ತಾ ಮಾರಣಾಂತಿಕ ಹಣದುಬ್ಬರ ಮೂಲಕ ಜನರ ಗಳಿಕೆಯನ್ನು ಲೂಟಿ ಮಾಡುತ್ತಿರುವ ಮೋದಿ ಸರ್ಕಾರ ಎಂದು ವಾಗ್ದಾಳಿ ನಡೆಸಿದೆ. 

ಬಡತನದ ಅಂಚಿನಲ್ಲಿ ವಾಸಿಸುವ ಜನರ ಜೀವನ ಮತ್ತು ಜೀವನೋಪಾಯವು ಕಳೆದ 9 ವರ್ಷಗಳಲ್ಲಿ ಬದಲಾಗದಿದ್ದರೂ ಸಹ ಮುಂದಿನ ಕೆಲವು ದಿನಗಳಲ್ಲಿ "ಸಚಿವರು ಮತ್ತು ಡೋಲು ಬಾರಿಸುವವರು" ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯ "ಮಹಾನ್ ಸಾಧನೆಗಳು" ಎಂದು ಕರೆಯುತ್ತಾರೆ ಎಂದು ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಬಿಜೆಪಿಯಿಂದ ಹಲವು ಕಾರ್ಯಕ್ರಮ: ಒಂಬತ್ತನೇ ವಾರ್ಷಿಕೋತ್ಸವವನ್ನು ವಿವಿಧ ಸಾಮೂಹಿಕ ಸಂಪರ್ಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಭಾರತೀಯ ಜನತಾ ಪಕ್ಷವು ಮಂಗಳವಾರದಿಂದ ಒಂದು ತಿಂಗಳ ಅವಧಿಯ ಪ್ರಚಾರವನ್ನು ಯೋಜಿಸಿದೆ, ಮೋದಿ ಅವರು ನಾಳೆ ರಾಜಸ್ಥಾನದ ಅಜ್ಮೀರ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸೋಮವಾರ ರಾಷ್ಟ್ರವ್ಯಾಪಿ ಪ್ರಚಾರದಲ್ಲಿ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದ್ದರು.

ಭಾರತದ ಸ್ಥಿತಿಗತಿ ಜಾಗತಿಕ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಜಾಗತಿಕ ಮಟ್ಟದಿಂದ ರಾಷ್ಟ್ರೀಯ ಭದ್ರತೆಗೆ ಒತ್ತು ನೀಡುವವರೆಗೆ, ಬಡವರಿಗೆ ವಸತಿ ಮತ್ತು ಶೌಚಾಲಯಗಳಂತಹ ಕಲ್ಯಾಣ ಕ್ರಮಗಳು, ಕೊಳವೆ ನೀರು ಪೂರೈಕೆಗೆ ಉತ್ತೇಜನ, ಮೂಲಸೌಕರ್ಯ ಬೆಳವಣಿಗೆ ಮತ್ತು ಉತ್ಪಾದನಾ ವಲಯವನ್ನು ಹೆಚ್ಚಿಸಲು ಪ್ರಯತ್ನಗಳು ಪ್ರಧಾನ ಮಂತ್ರಿಗಳು ಉಲ್ಲೇಖಿಸಿದ ಉಪಕ್ರಮಗಳಲ್ಲಿ ಸೇರಿವೆ. ಇದು ದೇಶದ ಪ್ರತಿಯೊಂದು ರಾಜ್ಯದಲ್ಲೂ ನಡೆಯುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com