ಬ್ಯಾಂಕ್ ವಂಚನೆ ಪ್ರಕರಣ: ಪಂಜಾಬ್‌ ಎಎಪಿ ಶಾಸಕನನ್ನು ಬಂಧಿಸಿದ ಇಡಿ

ಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ..
ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ
ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ
Updated on

ಚಂಡೀಗಢ: ಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರನ್ನುಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಲೇರ್‌ಕೋಟ್ಲಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಎಎಪಿ ಶಾಸಕರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಗಜ್ಜನ್ ಮಜ್ರಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್‌ ನೀಡಲಾಗಿತ್ತು. ಆದರೆ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಆದ್ದರಿಂದ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯು 40 ಕೋಟಿ ರೂ.ಗಳ ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಗಜ್ಜನ್ ಮಜ್ರಾ ಅವರ ಮನೆ ಸೇರಿದಂತೆ ಮೂರು ಕಡೆ ದಾಳಿ ನಡೆಸಿತ್ತು. ಈ ವೇಳೆ 16.57 ಲಕ್ಷ ನಗದು ಹಣ ಪತ್ತೆ ಆಗಿತ್ತು. ಬ್ಯಾಂಕ್ ಹಾಗೂ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com