ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿ

ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ
Updated on

ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಹೌದು.. ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ನ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಕೆಯಾದ 200 ಅಭ್ಯರ್ಥಿಗಳು ಅಯೋಧ್ಯೆಯಲ್ಲಿರುವ ವಿಶ್ವ ಹಿಂದೂ ಪರಿಷತ್‌ನ ಪ್ರಧಾನ ಕಛೇರಿಯಾದ ಕರಸೇವಕ ಪುರಂನಲ್ಲಿ ಸಂದರ್ಶನವನ್ನು ಎದುರಿಸುತ್ತಿದ್ದಾರೆ. ವೃಂದಾವನದ ಹಿಂದೂ ಧರ್ಮ ಪ್ರಚಾರಕ ಜಯಕಾಂತ್ ಮಿಶ್ರಾ ಅವರ ಮೂರು ಸದಸ್ಯರ ಸಮಿತಿ ಮತ್ತು ಅಯೋಧ್ಯೆಯ ಇಬ್ಬರು ಮಹಂತರಾದ ಮಿಥಿಲೇಶ್ ನಂದಿನಿ ಶರಣ್ ಮತ್ತು ಸತ್ಯನಾರಾಯಣ ದಾಸ್ ಅವರು ಸಂದರ್ಶನಗಳನ್ನು ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಸ್ಟ್ 20 ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಅರ್ಚಕರಾಗಿ ನೇಮಿಸಲಾಗುತ್ತದೆ ಮತ್ತು ಆರು ತಿಂಗಳ ವಸತಿ ತರಬೇತಿಯ ನಂತರ ವಿವಿಧ ಹುದ್ದೆಗಳಲ್ಲಿ ನಿಯೋಜಿಸಲಾಗುವುದು. ಆಯ್ಕೆಯಾಗದವರಿಗೆ ತರಬೇತಿಗೆ ಹಾಜರಾಗಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಟ್ರಸ್ಟ್ ಖಜಾಂಚಿ ಗೋವಿಂದ ದೇವಗಿರಿ ತಿಳಿಸಿದ್ದಾರೆ. ಅಂತೆಯೇ ಭವಿಷ್ಯದಲ್ಲಿ ರಚಿಸಬಹುದಾದ ಅರ್ಚಕ ಹುದ್ದೆಗಳಿಗೂ ಅವರನ್ನು ಕರೆಯುವ ಅವಕಾಶವಿದೆ ಎಂದು ಅವರು ಹೇಳಿದರು.

"ಸಂಧ್ಯಾ ವಂದನ' ಎಂದರೇನು, ಅದರ ಕಾರ್ಯವಿಧಾನಗಳು ಮತ್ತು ಈ ಪೂಜೆಗೆ 'ಮಂತ್ರಗಳು' ಯಾವುವು? ಭಗವಾನ್ ರಾಮನನ್ನು ಆರಾಧಿಸುವ 'ಮಂತ್ರಗಳು' ಯಾವುವು ಮತ್ತು ಇದಕ್ಕೆ 'ಕರ್ಮಕಾಂಡ' ಯಾವುವು? ... ಈ ಎಲ್ಲಾ ಪ್ರಕಾರಗಳು ಸಂದರ್ಶನಕ್ಕೆ ಬಂದಿದ್ದ ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಲಾಯಿತು’ ಎಂದು ಗಿರಿ ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com