ಸಿಲ್ಕ್ಯಾರ ಟನಲ್ ನಲ್ಲಿ ರಕ್ಷಣಾ ಕಾರ್ಯಾಚರಣೆ
ದೇಶ
ಸಿಲ್ಕ್ಯಾರ ಟನಲ್ ನಿಂದ ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ; ರಕ್ಷಣಾ ಕಾರ್ಯಾಚರಣೆ ಯಶಸ್ವಿ
ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ.
ಉತ್ತರ ಕಾಶಿ: ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ.
ಈ ಮೂಲಕ 17 ದಿನಗಳ ಕಾಲ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ಪ್ರಕ್ರಿಯೆ ಯಶಸ್ವಿಯಾಗಿದೆ. ಪೈಪ್ ಮೂಲಕ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ.
ಸುರಂಗದ ಒಳಗೆ ಸಿಲುಕಿದ್ದ ಕಾರ್ಮಿಕರಿಗೆ ಚಿಕಿತ್ಸೆ ನೀಡುವುದಕ್ಕಾಗಿ ರಕ್ಷಣಾ ಕಾರ್ಯಾಚರಣೆ ತಂಡ ಸಜ್ಜುಗೊಂಡಿದ್ದು, ಹೆಚ್ಚಿನ ವೈದ್ಯಕೀಯ ನೆರವು ಇರುವ ಕಾರ್ಮಿಕರನ್ನು ಏರ್ ಲಿಫ್ಟ್ ಮಾಡುವುದಕ್ಕೆ ವಾಯುಪಡೆ ಹೆಲಿಕಾಫ್ಟರ್ ಗಳನ್ನೂ ನಿಯೋಜಿಸಲಾಗಿದೆ. ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರೂ ಸುರಕ್ಷಿತವಾಗಿ ಹೊರ ಬಂದಿದ್ದು ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಒಟ್ಟು ನಾಲ್ಕು ಹಂತಗಳಲ್ಲಿ ಎಲ್ಲಾ 41 ಕಾರ್ಮಿಕರನ್ನೂ ಸುರಕ್ಷಿತವಾಗಿ ಹೊರಕರೆತರಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ