ಸಿಲ್ಕ್ಯಾರಾ ಸುರಂಗ ಕುಸಿತ: ರಕ್ಷಿಸಲ್ಪಟ್ಟ ಕಾರ್ಮಿಕರಿಗೆ ಋಷಿಕೇಶದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.
ರಕ್ಷಿಸಲ್ಪಟ್ಟ ಕಾರ್ಮಿಕರು
ರಕ್ಷಿಸಲ್ಪಟ್ಟ ಕಾರ್ಮಿಕರು
Updated on

ಡೆಹ್ರಾಡೂನ್: ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.

ಕಾರ್ಮಿಕರು ರೆಡಿಯೋಲಾಜಿ ಮತ್ತು ಹೃದ್ರೋಗ ಪರೀಕ್ಷೆಗಳಿಗೆ ಒಳಗಾಗಿದ್ದು, ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಏಮ್ಸ್‌ನ ವೈದ್ಯಕೀಯ ಅಧೀಕ್ಷಕ ರಿಷಿಕೇಶ್ ಆರ್ ಬಿ ಕಾಲಿಯಾ ತಿಳಿಸಿದ್ದಾರೆ.

ಈ ವರದಿಗಳ ಆಧಾರದ ಮೇಲೆ ಅವರನ್ನು ಪರೀಕ್ಷಿಸಿದ ವೈದ್ಯಕೀಯ ತಂಡ ಗುರುವಾರ ಅಭಿಪ್ರಾಯ ನೀಡಲಿದೆ. ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರು ಆರೋಗ್ಯವಾಗಿರುವುದಾಗಿ ಕಂಡುಬರುತ್ತಿದೆ. ಆದರೆ ಅವರ ಪರೀಕ್ಷಾ ವರದಿ ಬಂದಾಗ ಮಾತ್ರ ಏನಾದರೂ ನಿರ್ಣಾಯಕವಾಗಿ ಹೇಳಬಹುದು ಎಂದು ಅಧಿಕಾರಿ ಹೇಳಿದರು.

ಮಂಗಳವಾರ ಸಂಜೆ ಕಾರ್ಮಿಕರನ್ನು ಸ್ಥಳಾಂತರಿಸಿದ ತಕ್ಷಣ,  ಮೊದಲು ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಚಿನೂಕ್ ಹೆಲಿಕಾಪ್ಟರ್‌ನಲ್ಲಿ ಬುಧವಾರ ಮಧ್ಯಾಹ್ನ ರಿಷಿಕೇಶಕ್ಕೆ ಹಾರಿಸಲಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com