social_icon

ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ 59 ಜನ ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಸಾವುಗಳು ದಾಖಲಾಗಿವೆ. ನಾಂದೇಡ್‌ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ದರೆ ಔರಂಗಾಬಾದ್‌ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.

Published: 03rd October 2023 10:56 PM  |   Last Updated: 03rd October 2023 10:56 PM   |  A+A-


ಸಂಗ್ರಹ ಚಿತ್ರ

Posted By : Vishwanath S
Source : The New Indian Express

ಮುಂಬೈ: ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಸಾವುಗಳು ದಾಖಲಾಗಿವೆ. ನಾಂದೇಡ್‌ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ದರೆ ಔರಂಗಾಬಾದ್‌ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.

ನಾಂದೇಡ್ ಮತ್ತು ಘಾಟಿಯಲ್ಲಿ ಸಂಭವಿಸಿದ ಸಾವುಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇನ್ನು ನಾಂದೇಡ್ ಮತ್ತು ಘಾಟಿಯಲ್ಲಿ ಔಷಧಿ ಕೊರತೆ ಹಾಗೂ ವೈದ್ಯರ ಅಲಭ್ಯತೆಯಿಂದ ಸಾವು ಸಂಭವಿಸಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಶಿಂಧೆ ಅಲ್ಲಗಳೆದಿದ್ದಾರೆ.

ತನಿಖಾ ಸಮಿತಿಯ ವರದಿ ನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ನಾವು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಔರಂಗಾಬಾದ್‌ನ ನಾಂದೇಡ್ ಮತ್ತು ಘಾಟಿಯಲ್ಲಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ಸಚಿವರು, ಕಾರ್ಯದರ್ಶಿ ಮತ್ತು ಅಧಿಕಾರಿಗಳ ತಂಡವನ್ನು ಕಳುಹಿಸಿದ್ದೇವೆ ಎಂದು ಶಿಂಧೆ ಹೇಳಿದರು.

ಇನ್ನು ನಾಂದೇಡ್‌ ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು, 16 ಶಿಶುಗಳು ಸೇರಿದಂತೆ 35 ಜನರ ಸಾವಿಗೆ ಔಷಧಿಗಳ ಕೊರತೆ ಮತ್ತು ವೈದ್ಯಕೀಯ ಸಿಬ್ಬಂದಿಯ ಅಲಭ್ಯತೆ ಕಾರಣ ಎಂದು ಆರೋಪಿಸಿದ್ದಾರೆ. 70 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಅಜ್ಞಾತ ಕಾರಣಗಳಿಂದ ಔಷಧಿ ಪೂರೈಕೆ ಮತ್ತು ವೈದ್ಯರ ನೇಮಕಾತಿ ಸ್ಥಗಿತಗೊಂಡಿದೆ. ಹಲವಾರು ಜನರ ಪ್ರಾಣವನ್ನು ಕಳೆದುಕೊಂಡಿದೆ ಎಂದು ನಾವು ತಿಳಿದುಕೊಂಡಿದ್ದೇವೆ. ರಾಜ್ಯ ಸರ್ಕಾರ ಜವಾಬ್ದಾರಿಯನ್ನು ನಿಗದಿ ಪಡಿಸಿ ವ್ಯವಸ್ಥೆ ಸುಧಾರಿಸಬೇಕು ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಸಾವು: ಒಟ್ಟು ಮೃತರ ಸಂಖ್ಯೆ 31ಕ್ಕೆ ಏರಿಕೆ

ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಔಷಧಿಗಳ ಖರೀದಿಗೆ 40% ಕಮಿಷನ್ ಬೇಡಿಕೆಯಿರುವುದರಿಂದ ಔಷಧಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದರು. ಇನ್ನು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ನಡೆಸುವ ಸಿವಿಕ್ ಆಸ್ಪತ್ರೆಯಲ್ಲಿ ಈ ಹಿಂದೆ 17 ಜನರು ಸಾವನ್ನಪ್ಪಿದ್ದರು. ಆದರೆ ಅಂತಹ ದುರಂತಗಳಿಂದ ಇದುವರೆಗೆ ಸರ್ಕಾರ ಯಾವುದೇ ಪಾಠ ಕಲಿತಿಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಭ್ರಷ್ಟಾಚಾರದ ಕಾಯಿಲೆಯಿಂದ ಬಳಲುತ್ತಿದೆ. ಇಡೀ ವ್ಯವಸ್ಥೆ ವೆಂಟಿಲೇಟರ್‌ನಲ್ಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯರು, ಸಿಬ್ಬಂದಿ ಇಲ್ಲದೇ ಔಷಧಗಳ ಕೊರತೆಯೂ ಇದೆ. ಆಸ್ಪತ್ರೆಗಳಲ್ಲಿನ ಉಪಕರಣಗಳು ಕಾರ್ಯನಿರ್ವಹಿಸದೆ ಖಾಲಿ ಬಿದ್ದಿವೆ. ಪ್ರಮುಖ ನಗರಗಳ ಆರೋಗ್ಯ ಸೇವೆಗಳ ಸ್ಥಿತಿ ಹೀಗಿದ್ದರೆ, ಗ್ರಾಮೀಣ ಆಸ್ಪತ್ರೆಗಳ ಸ್ಥಿತಿಯನ್ನೇ ಊಹಿಸಬಹುದು. ರಾಜ್ಯ ಸರ್ಕಾರದ ವಿರುದ್ಧ ಐಪಿಸಿ 302ರ ಅಡಿಯಲ್ಲಿ ತಪ್ಪಿತಸ್ಥ ನರಹತ್ಯೆ ಪ್ರಕರಣ ದಾಖಲಿಸಬೇಕು ಎಂದು ಪಟೋಲೆ ಆಗ್ರಹಿಸಿದರು.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ಟ್ರಿಪಲ್ ಎಂಜಿನ್ ಸರ್ಕಾರವನ್ನು ಕಟುವಾಗಿ ಟೀಕಿಸಿದರು. ಇದು ಸಾಮಾನ್ಯ ಜನರಿಗೆ ಸಾರ್ವಜನಿಕ ಆರೋಗ್ಯವನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp