'ದೊಡ್ಡಣ್ಣನ ಸ್ಥಾನದಲ್ಲಿದ್ದೇವೆ' ಬಿಜೆಪಿ ಮೈತ್ರಿಕೂಟದ ಪಾಲುದಾರರಿಗಾಗಿ ತ್ಯಾಗ ಮಾಡಲು ಸಿದ್ಧ: ಫಡ್ನವಿಸ್
ಮೂರು ಪಕ್ಷಗಳ ಮೈತ್ರಿ ಸರ್ಕಾರದಲ್ಲಿ ಬಿಜೆಪಿ ದೊಡ್ಡಣ್ಣನ ಸ್ಥಾನದಲ್ಲಿರುವುದರಿಂದ ಅದರ ಪಾಲುದಾರರಾದ ಶಿವಸೇನೆ ಮತ್ತು ಎನ್ಸಿಪಿಗೆ ಹೊಂದಿಕೊಳ್ಳಲು ತ್ಯಾಗ ಮಾಡಲು ಸಿದ್ಧರಾಗಿರಬೇಕು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
Published: 03rd October 2023 11:22 PM | Last Updated: 03rd October 2023 11:22 PM | A+A A-

ದೇವೇಂದ್ರ ಫಡ್ನವಿಸ್
ಮುಂಬೈ: ಮೂರು ಪಕ್ಷಗಳ ಮೈತ್ರಿ ಸರ್ಕಾರದಲ್ಲಿ ಬಿಜೆಪಿ ದೊಡ್ಡಣ್ಣನ ಸ್ಥಾನದಲ್ಲಿರುವುದರಿಂದ ಅದರ ಪಾಲುದಾರರಾದ ಶಿವಸೇನೆ ಮತ್ತು ಎನ್ಸಿಪಿಗೆ ಹೊಂದಿಕೊಳ್ಳಲು ತ್ಯಾಗ ಮಾಡಲು ಸಿದ್ಧರಾಗಿರಬೇಕು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಇತರ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, 2024ರಲ್ಲಿ ನರೇಂದ್ರ ಮೋದಿಯವರನ್ನು ಭಾರತದ ಪ್ರಧಾನಿಯನ್ನಾಗಿ ಮಾಡುವ ಕೆಲಸ ಮಾಡಬೇಕು. ಬಿಜೆಪಿಗಾಗಿ ಅಲ್ಲ, ಭಾರತ ಮತ್ತು ದೇಶಕ್ಕಾಗಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಭಾರತದ ಪ್ರಧಾನಿ ಮಾಡಬೇಕು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸನ್ನು ನನಸು ಮಾಡಲು ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಮಿಷನ್ 2024 ದೇಶಕ್ಕೆ ಬಹಳ ಮುಖ್ಯವಾಗಿದೆ. ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವ ಸಾಮರ್ಥ್ಯ ಮೋದಿಜಿಗಿದೆ ಎಂದು ಫಡ್ನವೀಸ್ ಹೇಳಿದರು.
ಬಿಜೆಪಿ ಕಾರ್ಯಕರ್ತರು ತ್ಯಾಗ ಮಾಡುವುದರಲ್ಲಿ ಯಾವಾಗಲೂ ಮುಂದಿರುತ್ತಾರೆ. ಈಗ ದೇಶಕ್ಕಾಗಿ ಆ ಬದ್ಧತೆಯನ್ನು ತೋರಿಸುವ ಸಮಯ ಬಂದಿದೆ. ಬಿಜೆಪಿ ಸರ್ಕಾರದಲ್ಲಿ ಹಿರಿಯ ಸಹೋದರ ಆದ್ದರಿಂದ ನಾವು ಇತರ ಮೈತ್ರಿ ಪಾಲುದಾರರಿಗೆ ಅವಕಾಶ ಕಲ್ಪಿಸಲು ಹೆಚ್ಚಿನ ತ್ಯಾಗ ಮಾಡಲು ಸಿದ್ಧರಾಗಿರಬೇಕು ಎಂದು ಫಡ್ನವಿಸ್ ಹೇಳಿದರು.
ಇದನ್ನೂ ಓದಿ: ಕೇರಳ: ಬಿಜೆಪಿಗೆ ಸೇರ್ಪಡೆಯಾದ ಕೆಲವೇ ಗಂಟೆಗಳಲ್ಲಿ ಕರ್ತವ್ಯ ಕಳೆದುಕೊಂಡ ಚರ್ಚ್ ಪಾದ್ರಿ!
ನಮ್ಮ ದೇಶಕ್ಕೆ ಬಲವಾದ ನಾಯಕತ್ವದ ಅಗತ್ಯವಿದೆ. ಮೋದಿ ಜೀ ಅದನ್ನು ನಮ್ಮ ದೇಶಕ್ಕೆ ನೀಡಬಹುದು. ನಮ್ಮ ಆರ್ಥಿಕತೆಯು ವಿಸ್ತರಿಸುತ್ತಿದೆ. ಅದು ಸರಿಯಾದ ಹಾದಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಬಲಿಷ್ಠ ನಾಯಕತ್ವದಿಂದಾಗಿ ಹಲವು ದೇಶಗಳು ನಮ್ಮನ್ನು ಅನುಸರಿಸಲಾರಂಭಿಸಿವೆ. ಮೋದಿಜಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.
ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದಲ್ಲಿ ಪ್ರಬಲ ನಾಯಕರಿಲ್ಲ. ರಾಹುಲ್ ಗಾಂಧಿ ಅವರನ್ನು ಮೋದಿ ಜೊತೆಗೆ ಹೋಲಿಸಲಾಗುವುದಿಲ್ಲ. ಇಂಡಿಯಾ ಮೈತ್ರಿಕೂಟದ ಸದಸ್ಯರು ಪರಸ್ಪರ ಜಗಳವಾಡುತ್ತಿದ್ದಾರೆ. ಅವರಿಗೆ ಸ್ಪಷ್ಟವಾದ ಕಾರ್ಯತಂತ್ರವಿಲ್ಲ ಎಂದು ಫಡ್ನವಿಸ್ ಹೇಳಿದರು.