ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆ ಸೋಮವಾರ ನಿರ್ಣಯವನ್ನು ಅಂಗೀಕರಿಸಿತು.
ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್
ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್
Updated on

ಚೆನ್ನೈ: ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆ ಸೋಮವಾರ ನಿರ್ಣಯವನ್ನು ಅಂಗೀಕರಿಸಿತು.

ಬಿಜೆಪಿ ಸಭಾತ್ಯಾಗ ಮಾಡಿದ ನಂತರ ಸ್ಪೀಕರ್ ಎಂ ಅಪ್ಪಾವು ಅವರು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನಿರ್ಣಯವನ್ನು ಮಂಡಿಸಿದರು ಮತ್ತು ಕರ್ನಾಟಕವು 'ಕೃತಕ ಬಿಕ್ಕಟ್ಟು' ಸೃಷ್ಟಿಸಿದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಸ್ಟಾಲಿನ್ ನೇತೃತ್ವದ ಸದಸ್ಯರ ನಡುವಿನ ತೀವ್ರ ಚರ್ಚೆಯ ನಂತರ ಈ ಸಂಬಂಧ ನಿರ್ಣಯವನ್ನು ಅಂಗೀಕರಿಸಲಾಯಿತು. ಆದಾಗ್ಯೂ, ಎಐಎಡಿಎಂಕೆ ನಿರ್ಣಯವನ್ನು ಬೆಂಬಲಿಸಿತು.

ಅಂತರರಾಜ್ಯ ನದಿ ವಿವಾದಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಆಡಳಿತಾವಧಿಯಲ್ಲಿ ಕೈಗೊಂಡ ವಿವಿಧ ಉಪಕ್ರಮಗಳನ್ನು ಸ್ಮರಿಸಿದ ಪಳನಿಸ್ವಾಮಿ, ಈ ವಿಷಯದ ಬಗ್ಗೆ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಹೇರಬೇಕು ಎಂದು ಹೇಳಿದರು.

ಕೆಲವು ವರ್ಷಗಳ ಹಿಂದೆ ತಮ್ಮ ಪಕ್ಷವು ಈ ವಿಷಯಕ್ಕಾಗಿ ಸಂಸತ್ತನ್ನು ದಿನಗಳ ಕಾಲ ಸ್ಥಗಿತಗೊಳಿಸಿತ್ತು ಎಂದು ಅವರು ನೆನಪಿಸಿಕೊಂಡರು.

ಈ ನಿರ್ಣಯ ಅಂಗೀಕಾರವು ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸಮಗ್ರ ಮತ್ತು ಪರಿಪೂರ್ಣ ಪರಿಹಾರ ನೀಡುವ ಗುರಿಯನ್ನು ಹೊಂದಿರುವುದು ಕಾಣುತ್ತಿಲ್ಲ ಮತ್ತು ಈ ನಿರ್ಣಯಕ್ಕೆ ತಾನು ಪ್ರಸ್ತಾಪಿಸಿದ ಯಾವುದೇ ತಿದ್ದುಪಡಿಗಳನ್ನು ಸೇರಿಸುವ ಬಗ್ಗೆ ಸರ್ಕಾರ ಭರವಸೆ ನೀಡದ ಕಾರಣ ಬಿಜೆಪಿ ಸಭಾತ್ಯಾಗ ಮಾಡಿತು.

ಈ ತಿದ್ದುಪಡಿಗಳು ನದಿಗಳ ರಾಷ್ಟ್ರೀಕರಣ ಮತ್ತು ಕೇಂದ್ರದ ಅಣೆಕಟ್ಟು ಸುರಕ್ಷತಾ ಮಸೂದೆಗೆ ಬೆಂಬಲವನ್ನು ಒಳಗೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com