ನವದೆಹಲಿ: ವಿಜಯದಶಮಿ, ರಾವಣ ಪ್ರತಿಕೃತಿ ದಹಿಸಿದ ಪ್ರಧಾನಿ ಮೋದಿ!

ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಭಾಗವಹಿಸಿದರು.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಭಾಗವಹಿಸಿದರು.

ಶ್ರೀ  ರಾಮಲೀಲಾ ಸೊಸೈಟಿ ಆಯೋಜಿಸಿದ 11ನೇ ರಾಮಲೀಲಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ಬಾಣ ಬಿಡುವ ಮೂಲಕ ರಾವಣನ ಪ್ರತಿಕೃತಿಯನ್ನು ದಹಿಸಿದರು.

ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ  ಮಾತನಾಡಿದ ಪ್ರಧಾನಿ, ದೇಶದ ಎಲ್ಲಾ ಪ್ರಜೆಗಳಿಗೆ ನವರಾತ್ರಿ ಹಾಗೂ ವಿಜಯದಶಮಿ ಶುಭಾಶಯ ಕೋರಿದರು. ದುಷ್ಟರ ವಿರುದ್ಧ ಶಿಷ್ಟರ ವಿಜಯದ ಸಂಕೇತವಾಗಿ ಈ ಹಬ್ಬ ಆಚರಿಸಲಾಗುತ್ತಿದೆ ಎಂದರು.

ದೀರ್ಘಕಾಲದ ಕಾಯುವಿಕೆಯ ನಂತರ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದನ್ನು ನೋಡುವ ಭಾಗ್ಯ ನಮ್ಮದಾಗಿದೆ. ಇದು ನಮ್ಮ ತಾಳ್ಮೆಯ ವಿಜಯದ ಸಂಕೇತವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com