social_icon

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

Published: 02nd September 2023 01:18 PM  |   Last Updated: 02nd September 2023 01:18 PM   |  A+A-


Casual_Arrested_images1

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : PTI

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅವಿತಿದ್ದ ಇಬ್ಬರು ಉಗ್ರರನ್ನು ವಿಶೇಷ ಕಾರ್ಯಾಚರಣೆ ನಡೆಸಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂದಿತ ಆರೋಪಿಗಳನ್ನು ಘಾಟ್ ಗ್ರಾಮದ ಫಿರ್ದೌಸ್ ಅಹ್ಮದ್ ವಾನಿ ಮತ್ತು ಭಾರತ್ ಗ್ರಾಮದ ಖುರ್ಷಿದ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

ಇಬ್ಬರೂ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದು, 1990 ರ ದಶಕದಲ್ಲಿ ತಮ್ಮ ತವರು ಜಿಲ್ಲೆಯಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಹಲವು ದಶಕಗಳಿಂದ ಇವರು ಸ್ಥಳೀಯ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ಬಂಧನಗಳೊಂದಿಗೆ, ಆಗಸ್ಟ್ 31 ರಿಂದ ಜಮ್ಮು ಪ್ರದೇಶದಲ್ಲಿ ದಶಕಗಳಿಂದ ತಲೆಮರೆಸಿಕೊಂಡಿರುವ ಒಟ್ಟು 10 ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಹೆಚ್ಚಿನವರು ದೋಡಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ಶಾಶ್ವತವಲ್ಲ, ಪುಲ್ವಾಮಾ ದಾಳಿಯೇ ಕಾರಣ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ!

ಅಧಿಕಾರಿಗಳ ಪ್ರಕಾರ, ವಿಶೇಷ ತನಿಖಾ ಸಂಸ್ಥೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಶೂನ್ಯ ಭಯೋತ್ಪಾದನೆಯನ್ನು ಸಾಧಿಸುವ ತನ್ನ ದೊಡ್ಡ ಉದ್ದೇಶ ಮತ್ತು ಆದೇಶದ ಅನುಸಾರವಾಗಿ, ಕಾನೂನಿನಡಿಯಲ್ಲಿ ವಿಚಾರಣೆಯನ್ನು ಎದುರಿಸಲು ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲಾ ಪರಾರಿ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಕಾಶ್ಮೀರದಲ್ಲಿ 417 ಮತ್ತು ಜಮ್ಮುವಿನಲ್ಲಿ 317 ಸೇರಿದಂತೆ ಒಟ್ಟು 734 ತಲೆಮರೆಸಿಕೊಂಡವರಲ್ಲಿ 327 ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಲ್ಲಿ ಬೇಕಾಗಿದ್ದಾರೆ, ಎಸ್‌ಐಎ ಇದುವರೆಗೆ 369 ತಲೆಮರೆಸಿಕೊಂಡವರನ್ನು ಪರಿಶೀಲಿಸಿದೆ ಮತ್ತು ಗುರುತಿಸಿದೆ. ಈ ಪೈಕಿ ಜಮ್ಮುವಿನಲ್ಲಿ 215 ಮತ್ತು ಕಾಶ್ಮೀರದಲ್ಲಿ 154 ತಲೆಮರೆಸಿಕೊಂಡವರನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp