ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್-ಕುಷ್ಠ ರೋಗವಿದ್ದಂತೆ: ಡಿಎಂಕೆ ಎ.ರಾಜಾ

ಡಿಎಂಕೆ  ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.
ಎ.ರಾಜಾ
ಎ.ರಾಜಾ
Updated on

ನವದೆಹಲಿ: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಡಿಎಂಕೆ  ಸಂಸದ ಎ.ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.

ಉದಯನಿಧಿಯವರು ಸನಾತನ ಧರ್ಮದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ. ಮಲೇರಿಯಾ, ಡೆಂಘೀ ಅಂತ ರೋಗಗಳು ಸಾಮಾಜಿಕ ಪಿಡುಗು ಅಲ್ಲ. ಅದನ್ನು ಜನರು ಭಯದಿಂದ ನೋಡುವುದಿಲ್ಲ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕುಷ್ಠ ರೋಗ, ಎಚ್ಐವಿಯನ್ನು ಅಸಹ್ಯಕರವಾಗಿ ನೋಡಲಾಗುತ್ತದೆ. ಆದ್ದರಿಂದ ನಾವು ಇದನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಅವಸ್ಥೆಯಿಂದ ಕೂಡಿದ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಎ.ರಾಜಾ ಹೇಳಿದ್ದಾರೆ

ಸನಾತನ ಮತ್ತು ವಿಶ್ವಕರ್ಮ ಯೋಜನೆ ಒಂದೇ. ಪ್ರಧಾನಿ ಮೋದಿಯವರು ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಯಾರನ್ನಾದರೂ ಕರೆ ತನ್ನಿ, ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ.

ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ನಾನು ದೆಹಲಿಗೆ ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ಚರ್ಚೆಗೆ ಬರುತ್ತೇನೆ ಎಂದು ಎ.ರಾಜಾ ಹೇಳಿದರು. ನಾನು ಕೇವಲ ಪಂಚಮ ಸೂತ್ರದವನು, ಅವರು ವಿಶ್ವಗುರುವಿನ ಮುಂದೆ ಬಂದು ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಸಭೆ ಕರೆದರೆ ಮತ್ತು ಅವರು ನನಗೆ ಅನುಮತಿ ನೀಡಿದರೆ ಎಲ್ಲಾ ಕ್ಯಾಬಿನೆಟ್ ಮಂತ್ರಿಗಳಿಗೆ ಉತ್ತರವನ್ನು ನೀಡಲು ನಾನು ಸಿದ್ಧನಿದ್ದೇನೆ. ಸನಾತನ ಧರ್ಮ ಯಾವುದು ಎಂಬುದನ್ನು ನೀವು ನಿರ್ಧರಿಸಿದ ನಂತರ ನಾನು ವಿವರಿಸುತ್ತೇನೆ ಎಂದು ಎ.ರಾಜಾ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com