ರಾಜಸ್ಥಾನ: ಶಿಂಧೆ ಶಿವಸೇನೆ ಸೇರಿದ ವಜಾಗೊಂಡಿದ್ದ ಕಾಂಗ್ರೆಸ್ ಸಚಿವ ರಾಜೇಂದ್ರ ಗುಧಾ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿವ ಸಂಪುಟದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಮಾಜಿ ಶಾಸಕ ರಾಜೇಂದ್ರ ಗುಧಾ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.
ಶಿವಸೇನೆ ಸೇರಿದ ರಾಜೇಂದ್ರ ಗುಧಾ
ಶಿವಸೇನೆ ಸೇರಿದ ರಾಜೇಂದ್ರ ಗುಧಾ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿವ ಸಂಪುಟದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಮಾಜಿ ಶಾಸಕ ರಾಜೇಂದ್ರ ಗುಧಾ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

ರೆಡ್ ಡೈರಿ ವಿಚಾರ ಸಂಬಂಧ ಗೆಹ್ಲೋಟ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಗುಧಾ ಅವರು ಇಂದು ಏಕನಾಥ್ ಶಿಂಧೆ ಅವರ ಸಮ್ಮುಖದಲ್ಲಿ ಶಿವಸೇನೆ ಸೇರಿದರು. 

ರಾಜೇಂದ್ರ ಗುಧಾ ಅವರನ್ನು ರಾಜಸ್ಥಾನದ ಶಿವಸೇನಾ ಸಂಯೋಜಕರಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಮತ್ತು ನಿರ್ದಿಷ್ಟವಾಗಿ ಸಿಎಂ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದ್ದ ಗುಧಾ ಅವರು ಬಿಜೆಪಿ ಸೇರುತ್ತಾರೆ ಎಂದು ಹಲವರು ನಿರೀಕ್ಷಿಸಿದ್ದರು. ಆದರೆ ಅನಿರೀಕ್ಷಿತವಾಗಿ ಶಿವಸೇನೆ ಸೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com