social_icon

ಪ್ರತಿಭಟಿಸಲು, ವಿರೋಧಿಸಲು ಸಮಯವಿದೆ, ಈ ಸಣ್ಣ ಅವಧಿಯ ವಿಶೇಷ ಅಧಿವೇಶನವನ್ನು ಸದ್ಭಳಕೆ ಮಾಡೋಣ: ಪ್ರಧಾನಿ ಮೋದಿ

ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ. ಈ ಅಧಿವೇಶನದ ವಿಶೇಷತೆ ಏನೆಂದರೆ ಸ್ವಾತಂತ್ರ್ಯ ನಂತರ ಭಾರತದ 75 ವರ್ಷಗಳ ಪಯಣ ಹೊಸ ಗಮ್ಯದಿಂದ ಆರಂಭವಾಗುತ್ತಿದೆ.

Published: 18th September 2023 11:04 AM  |   Last Updated: 18th September 2023 12:12 PM   |  A+A-


PM Narendra Modi speaks with media before special session of parliament

ವಿಶೇಷ ಅಧಿವೇಶನ ಆರಂಭಕ್ಕೆ ಮುನ್ನ ಮಾತನಾಡಿದ ಪ್ರಧಾನಿ ಮೋದಿ

Posted By : Sumana Upadhyaya
Source : PTI

ನವ ದೆಹಲಿ: ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ. ಈ ಅಧಿವೇಶನದ ವಿಶೇಷತೆ ಏನೆಂದರೆ ಸ್ವಾತಂತ್ರ್ಯ ನಂತರ ಭಾರತದ 75 ವರ್ಷಗಳ ಪಯಣ ಹೊಸ ಗಮ್ಯದಿಂದ ಆರಂಭವಾಗುತ್ತಿದೆ. ಈಗ ಹೊಸ ಜಾಗದಿಂದ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವಾಗಲೇ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕಿದೆ. ಮುಂಬರುವ ಎಲ್ಲಾ ನಿರ್ಧಾರಗಳನ್ನು ಹೊಸ ಸಂಸತ್ತಿನ ಕಟ್ಟಡದಲ್ಲಿ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಆರಂಭಕ್ಕೆ ಮುನ್ನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಇದೊಂದು ಚಿಕ್ಕ ಅಧಿವೇಶನ. ಸಂಸದರು ಉತ್ಸಾಹದಿಂದ ಪಾಲ್ಗೊಂಡು ಅಧಿವೇಶನಕ್ಕೆ ಗರಿಷ್ಠ ಸಮಯವನ್ನು ಮೀಸಲಿಡಬೇಕು. ಪ್ರತಿಭಟಿಸಲು ಸಾಕಷ್ಟು ಸಮಯವಿದೆ, ಅದನ್ನು ಮಾಡುತ್ತಲೇ ಇರಬಹುದು. ಜೀವನದಲ್ಲಿ ಕೆಲವು ಕ್ಷಣಗಳು ನಿಮ್ಮಲ್ಲಿ ಉತ್ಸಾಹ ಮತ್ತು ನಂಬಿಕೆಯನ್ನು ತುಂಬುತ್ತವೆ. ನಾನು ಈ ಕಿರು ಅಧಿವೇಶನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದನ್ನು ನೋಡುತ್ತೇನೆ ಎಂದರು.

ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಮಂಗಳವಾರ ಅಧಿವೇಶನ ಆರಂಭ: ಪ್ರಹ್ಲಾದ್ ಜೋಷಿ

G20 ಶೃಂಗಸಭೆಯ ಸಮಯದಲ್ಲಿ ನಾವು ಜಾಗತಿಕ ದಕ್ಷಿಣದ ಧ್ವನಿಯಾಗಿದ್ದೇವೆ. ಆಫ್ರಿಕನ್ ಯೂನಿಯನ್ G20 ಯ ಖಾಯಂ ಸದಸ್ಯತ್ವ ಪಡೆದಿದೆ ಎಂದು ಭಾರತವು ಯಾವಾಗಲೂ ಹೆಮ್ಮೆಪಡುತ್ತದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ. ನಿನ್ನೆ 'ಯಶೋಭೂಮಿ' ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ದೇಶಕ್ಕೆ ಸಮರ್ಪಿಸಲಾಗಿದೆ. ಇವುಗಳೆಲ್ಲಾ ನವ ಭಾರತದ ಸಂಕೇತವಾಗಿದೆ ಎಂದರು.

ನಾಳೆ ಗಣೇಶ ಚತುರ್ಥಿಯಂದು ನಾವು ಹೊಸ ಸಂಸತ್ತು ಕಟ್ಟಡಕ್ಕೆ ಪ್ರವೇಶಿಸುತ್ತಿದ್ದೇವೆ. ಗಣೇಶನಿಗೆ 'ವಿಘ್ನಹರ್ತಾ' ಎಂಬ ಹೆಸರಿದೆ, ಈಗ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲ. ಭಾರತವು ತನ್ನ ಎಲ್ಲಾ ಕನಸುಗಳು ಮತ್ತು ನಿರ್ಣಯಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಈಡೇರಿಸುತ್ತದೆ. ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಇದು ವ್ಯಾಪ್ತಿಯಲ್ಲಿ ಐತಿಹಾಸಿಕವಾಗಿದೆ ಎಂದರು. 

ಇಂದಿನಿಂದ ಆರಂಭವಾಗುತ್ತಿರುವ ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಅವರು ಕೆಳಮನೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಮಾತನಾಡಲಿದ್ದಾರೆ.

ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಇಂದು ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ನಾಳೆ ಸೆಪ್ಟೆಂಬರ್ 19 ರಂದು ಸಂಸತ್ತಿನ ಕಲಾಪಗಳು ಹಳೆಯದರಿಂದ ಪಕ್ಕದ ಹೊಸ ಅತ್ಯಾಧುನಿಕ ಕಟ್ಟಡಕ್ಕೆ ಬದಲಾಗಲಿವೆ.


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp