ಎಐಎಡಿಎಂಕೆ-ಬಿಜೆಪಿ ಮೈತ್ರಿ ಕಡಿತ: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ ಎಂದ ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಪ್ರತಿಕ್ರಿಯಿಸಿದ್ದು ಎರಡು ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್
Updated on

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಪ್ರತಿಕ್ರಿಯಿಸಿದ್ದು ಎರಡು ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ’ ಎಂಬಂತೆ ಎರಡೂ ಪಕ್ಷಗಳು ಒಟ್ಟಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸಬಹುದು. ಎಐಎಡಿಎಂಕೆ ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡರೂ, 2024ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ವಿಜಯಶಾಲಿಯಾಗಲಿದೆ ಎಂದು ಅವರು ಭವಿಷ್ಯ ನುಡಿದರು.

ಮತ್ತೆ ಹೇಳಿಕೆ ನೀಡಿದ ಸ್ಟಾಲಿನ್ ಎಐಎಡಿಎಂಕೆ ಮತ್ತು ಬಿಜೆಪಿ ಜಗಳವಾಡುವುದು ಮೊದಲ ಬಾರಿಯಲ್ಲ ಆದರೆ ಚುನಾವಣೆಯ ಸಮಯದಲ್ಲಿ, ಅವರು ಮತ್ತೆ ಒಂದಾಗುತ್ತಾರೆ ಏಕೆಂದರೆ ಒಬ್ಬರು ದರೋಡೆಕೋರರು ಮತ್ತು ಇನ್ನೊಬ್ಬರು ಕಳ್ಳರು” ಎಂದು ಅವರು ಹೇಳಿದರು.

ಎಐಎಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ನಂತರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ತನ್ನ ಸಂಬಂಧವನ್ನು ಎಐಎಡಿಎಂಕೆ ಮುರಿದುಕೊಂಡಿದೆ, ಬಿಜೆಪಿಯು ಎಐಎಡಿಎಂಕೆಯ ಮಾಜಿ ನಾಯಕರ ಬಗ್ಗೆ ಅನಗತ್ಯ ಟೀಕೆಗಳನ್ನು ಮಾಡುತ್ತಿದೆ ಎಂದು ಹೇಳಿದೆ.

ಜಯಲಲಿತಾ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಅಣ್ಣಾಮಲೈ ಮಾತನಾಡಿದ್ದರು. ಪಕ್ಷದ ಸಂಸ್ಥಾಪಕ ಅಣ್ಣಾದೊರೈ ಬಗ್ಗೆ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಣ್ಣಾಮಲೈ ಬಗ್ಗೆ ದೂರು ಕೊಟ್ಟರೂ ಹೈಕಮಾಂಡ್ ಸ್ಪಂದಿಸಲಿಲ್ಲ ಎಂಬ ಕೋಪವೂ ಇದೆ. ಇನ್ನು ಪೆರಿಯಾರ್ವಾವಾದದ ವಿರುದ್ಧ ಬಿಜೆಪಿಗರ ನಿರಂತರ ವಾಗ್ದಾಳಿ ನಡೆಸಿತ್ತು.

ಬಿಜೆಪಿ ಜೊತೆ ಕೈಜೋಡಿಸಿದ್ದರಿಂದಲೇ ಕಳೆದ ಬಾರಿ ಸೋಲು ಎಂಬ ಅಭಿಪ್ರಾಯಕ್ಕೆ ಅಣ್ಣಾಡಿಎಂಕೆ ಬಂದಿದ್ದು, ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆ ಒಮ್ಮತದ ಸಹಮತ ಮೂಡದ ಪರಿಣಾಮ ಬಿಜೆಪಿಗೆ ಶಾಕ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com