social_icon

ಪುಲ್ವಾಮಾ ದಾಳಿ ತನಿಖಾಧಿಕಾರಿ ರಾಕೇಶ್ ಬಲ್ವಾಲ್ ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ!

ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿರುವ ನಡುವೆಯೇ, ಕೇಂದ್ರ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಬಲ್ವಾಲ್ ಅವರನ್ನು ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ ಮಾಡಿದೆ. ರಾಕೇಶ್ ಅವರು 2021ರ ಕೊನೆಯಲ್ಲಿ ಶ್ರೀನಗರ ಎಸ್ಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದರು.

Published: 28th September 2023 01:25 PM  |   Last Updated: 28th September 2023 07:55 PM   |  A+A-


Rakesh Balwal

ರಾಕೇಶ್ ಬಲ್ವಾಲ್

Posted By : Ramyashree GN
Source : PTI

ನವದೆಹಲಿ: ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿರುವ ನಡುವೆಯೇ, ಕೇಂದ್ರ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಬಲ್ವಾಲ್ ಅವರನ್ನು ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ ಮಾಡಿದೆ.

ಶ್ರೀನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಎಸ್‌ಪಿ) ಸೇವೆ ಸಲ್ಲಿಸುದ್ದ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಬಲ್ವಾಲ್ ಅವರನ್ನು ಅವರ ಪೋಷಕ ಕೇಡರ್ ಮಣಿಪುರಕ್ಕೆ ವರ್ಗಾಯಿಸಲಾಗಿದೆ. ಮಣಿಪುರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ರಾಕೇಶ್ ಅವರು 2021ರ ಕೊನೆಯಲ್ಲಿ ಶ್ರೀನಗರ ಎಸ್ಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದರು.

'ಐಪಿಎಸ್ ಅಧಿಕಾರಿ ರಾಕೇಶ್ ಬಲ್ವಾಲ್ ಅವರನ್ನು ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ (AGMUT) ಕೇಡರ್‌ನಿಂದ ಮಣಿಪುರ ಕೇಡರ್‌ಗೆ ಅವಧಿಪೂರ್ವ ವರ್ಗಾಯಿಸುವ ಗೃಹ ವ್ಯವಹಾರಗಳ ಸಚಿವಾಲಯದ ಪ್ರಸ್ತಾವನೆಯನ್ನು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ' ಎಂದು ಅಧಿಕೃತ ಆದೇಶ ತಿಳಿಸಿದೆ.

ಶ್ರೀನಗರ ಎಸ್‌ಎಸ್‌ಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಬಲ್ವಾಲ್ ಅವರು ಮೂರೂವರೆ ವರ್ಷಗಳ ಕಾಲ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ಎನ್‌ಐಎಗೆ ನಿಯೋಜನೆಗೊಂಡಿದ್ದರು. 40 ಸಿಆರ್‌ಪಿಎಫ್ ಸಿಬ್ಬಂದಿ ಪ್ರಾಣ ಕಳೆದುಕೊಂಡ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ತನಿಖೆ ನಡೆಸಿದ ತಂಡದ ಸದಸ್ಯರಾಗಿದ್ದರು.

ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಇಂಫಾಲದಲ್ಲಿ ಡಿಸಿ ಕಚೇರಿ ಧ್ವಂಸ, ಎರಡು ವಾಹನಗಳಿಗೆ ಬೆಂಕಿ

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಈವರೆಗೂ 180ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. 

ಜುಲೈನಲ್ಲಿ ನಾಪತ್ತೆಯಾದ ಮೈತೇಯಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಬಾರಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ಮುಂಜಾನೆಯಿಂದ ಹೊಸ ಹಿಂಸಾಚಾರ ಭುಗಿಲೆದ್ದಿದೆ.

ಗುರುವಾರ ಮುಂಜಾನೆ ಪ್ರತಿಭಟನಾಕಾರರು ಇಂಫಾಲ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಿದ್ದು, ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp