ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಬೇಕು: ಪತ್ನಿ ಸುನೀತಾಗೆ ಆಪ್ ಶಾಸಕರ ಆಗ್ರಹ

ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಎಎಪಿ ಶಾಸಕರು ಪ್ರತಿಪಾದಿಸಿದರು.
ಸುನೀತಾ ಕೇಜ್ರಿವಾಲ್
ಸುನೀತಾ ಕೇಜ್ರಿವಾಲ್

ನವದೆಹಲಿ: ಎಎಪಿ ಶಾಸಕರು ಮಂಗಳವಾರ ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ, ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಪ್ರತಿಪಾದಿಸಿದರು.

ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇಂದು ನಡೆದ ಸಭೆಯಲ್ಲಿ ಎಎಪಿ ಶಾಸಕರು, ದೆಹಲಿಯ ಎರಡು ಕೋಟಿ ಜನ ಮುಖ್ಯಮಂತ್ರಿಯೊಂದಿಗೆ ನಿಂತಿದ್ದಾರೆ ಮತ್ತು ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಪಕ್ಷದ ಮುಖಂಡರು ಸುನೀತಾ ಕೇಜ್ರಿವಾಲ್ ಅವರಿಗೆ ಹೇಳಿದರು.

ಸುನೀತಾ ಕೇಜ್ರಿವಾಲ್
ತಿಹಾರ್‌ ಜೈಲಿನಲ್ಲಿ ರಾತ್ರಿ ಕಳೆದ ಅರವಿಂದ ಕೇಜ್ರಿವಾಲ್, ವೈದ್ಯಕೀಯ ಪರೀಕ್ಷೆಯಲ್ಲಿ ಕಡಿಮೆ ಸಕ್ಕರೆ ಮಟ್ಟ ಪತ್ತೆ: ಜೈಲು ಅಧಿಕಾರಿಗಳು

ದೆಹಲಿಯಲ್ಲಿರುವ ಎಎಪಿಯ 62 ಶಾಸಕರ ಪೈಕಿ 55 ಶಾಸಕರು ಸಭೆಯಲ್ಲಿ ಹಾಜರಿದ್ದರು.

ನಾಲ್ವರು ಶಾಸಕರು ದೆಹಲಿಯಿಂದ ಹೊರಗಿದ್ದು, ಮೂವರು - ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com