ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ: ದೇವೇಂದ್ರ ಫಡ್ನವಿಸ್

ಸಂವಿಧಾನವನ್ನು ಬದಲಾಯಿಸಲು ಅಥವಾ ನಾಗರಿಕರಿಗೆ ಒದಗಿಸಲಾದ ಹಕ್ಕುಗಳನ್ನು ಮೊಟಕುಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಬುಧವಾರ ಹೇಳಿದ್ದಾರೆ.
Devendra Fadnavis
ದೇವೇಂದ್ರ ಫಡ್ನವಿಸ್
Updated on

ಮುಂಬೈ: ಸಂವಿಧಾನವನ್ನು ಬದಲಾಯಿಸಲು ಅಥವಾ ನಾಗರಿಕರಿಗೆ ಒದಗಿಸಲಾದ ಹಕ್ಕುಗಳನ್ನು ಮೊಟಕುಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಬುಧವಾರ ಹೇಳಿದ್ದಾರೆ.

ಪೂರ್ವ ಮಹಾರಾಷ್ಟ್ರದ ಅಕೋಲಾ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಅನುಪ್ ಧೋತ್ರೆ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಫಡ್ನವೀಸ್, 'ಸಂವಿಧಾನ ನೀಡಿರುವ ಹಕ್ಕುಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಹುದ್ದೆಗೆ ತಲುಪಿದ್ದಾರೆ.

ಕೇಸರಿ ಪಡೆ ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷಗಳು ಆಗಾಗ್ಗೆ ಆರೋಪಿಸುತ್ತಿವೆ. ಆದರೆ ಈ ನಿರೂಪಣೆಗೆ ಯಾವುದೇ ಆಧಾರವಿಲ್ಲ. ಚಂದ್ರ, ಸೂರ್ಯ ಮತ್ತು ನಕ್ಷತ್ರಗಳು ಇರುವವರೆಗೆ ಯಾರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Devendra Fadnavis
ಸಂವಿಧಾನ ಬದಲಾವಣೆ ಬಿಜೆಪಿಯ ರಹಸ್ಯ ಅಜೆಂಡಾ, ಇದು ನಡೆದರೆ ದೇಶದಲ್ಲಿ ರಕ್ತಪಾತವಾಗಲಿದೆ: ಸಿಎಂ ಸಿದ್ದರಾಮಯ್ಯ

ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಲು ಚುನಾಯಿತರಾಗಲು ಎಂದಿಗೂ ಅನುಮತಿಸಲಿಲ್ಲ ಮತ್ತು ಅಕೋಲಾ ಲೋಕಸಭಾ ಕ್ಷೇತ್ರದಿಂದ ವಂಚಿತ್ ಬಹುಜನ ಆಘಾಡಿ ಅಭ್ಯರ್ಥಿಯಾಗಿರುವ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರೊಂದಿಗೆ ಕಾಂಗ್ರೆಸ್ ಪಕ್ಷವು ಈಗ ಅದೇ ರೀತಿ ಮಾಡುತ್ತದೆ ಎಂದು ಫಡ್ನವಿಸ್ ಕಿಡಿರಾರಿದರು.

ಬಿಜೆಪಿ ಪ್ರಧಾನಿ ಮೋದಿಯವರಿಗೆ ಮತ ಕೇಳುತ್ತಿದೆ, ಅವರ ಅಧಿಕಾರಾವಧಿಯಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಮತ್ತು ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com