ಉತ್ತರಾಖಂಡ್ ನ ನೈನಿತಾಲ್ ನಲ್ಲಿ ಕಮರಿಗೆ ಉರುಳಿಬಿದ್ದ ವಾಹನ: 8 ಮಂದಿ ಸಾವು

ಕಳೆದ ರಾತ್ರಿ ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯಲ್ಲಿ ವಾಹನ ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಮೃತಪಟ್ಟಿು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನೈನಿತಾಲ್: ಕಳೆದ ರಾತ್ರಿ ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯಲ್ಲಿ ವಾಹನ ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಮೃತಪಟ್ಟಿು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೈನಿತಾಲ್‌ನ ಬೇಟಾಲ್‌ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ವಿಶ್ರಮ್ ಚೌಧರಿ (50), ಧೀರಜ್ (45), ಅನಂತರಾಮ್ ಚೌಧರಿ (40), ವಿನೋದ್ ಚೌಧರಿ (38), ಉದಯರಾಮ್ ಚೌಧರಿ (55), ತಿಲಕ್ ಚೌಧರಿ (45) ಗೋಪಾಲ್ ಬಸ್ನಿಯಾತ್ (60) ಮತ್ತು ರಾಜೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಶಾಂತಿ ಚೌಧರಿ, ಛೋಟು ಚೌಧರಿ ಮತ್ತು ಪ್ರೇಮ್ ಬಹದ್ದೂರ್ ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ
ರಸ್ತೆ ಅಪಘಾತ ಹೆಚ್ಚಳ: ಬೆಂಗಳೂರಿನಲ್ಲಿ ಪ್ರತಿದಿನ ಇಬ್ಬರು ಸಾವು- ಎಡಿಜಿಪಿ ಅಲೋಕ್ ಕುಮಾರ್

ಕಳೆದ ರಾತ್ರಿ 10.30 ರ ಸುಮಾರಿಗೆ ಬಸ್ಕೋಟ್ ಗ್ರಾಮದ ನಿವಾಸಿ ಚಾಲಕ ರಾಜೇಂದ್ರ ಕುಮಾರ್ (38) ವಾಹನದ ನಿಯಂತ್ರಣ ಕಳೆದುಕೊಂಡು 200 ಮೀಟರ್ ಕಮರಿಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com