ದ್ವಿಪಕ್ಷೀಯ ಮಾತುಕತೆ ಮೂಲಕ ಭಾರತ-ಚೀನಾ ಗಡಿಯಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯ: ಪ್ರಧಾನಿ ಮೋದಿ

ಭಾರತಕ್ಕೆ, ಚೀನಾದೊಂದಿಗಿನ ಸಂಬಂಧ ಅತ್ಯಂತ ಮುಖ್ಯವಾಗಿದೆ ಎಂದು ಅಮೆರಿಕದ ನ್ಯೂಸ್‌ವೀಕ್ ಮ್ಯಾಗಜಿನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ದ್ವಿಪಕ್ಷೀಯ ಮಾತುಕತೆ ಮೂಲಕ ಭಾರತ-ಚೀನಾ ಗಡಿಯಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯ: ಪ್ರಧಾನಿ ಮೋದಿ
Updated on

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸ್ಥಿರ ಮತ್ತು ಶಾಂತಿಯುತ ಸಂಬಂಧ ಇಡೀ ಪ್ರದೇಶ ಮತ್ತು ಜಗತ್ತಿಗೆ ಮುಖ್ಯವಾಗಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದಲ್ಲಿ ಪಾಸಿಟಿವ್ ಹಾಗೂ ರಚನಾತ್ಮಕ ದ್ವಿಪಕ್ಷೀಯ ಮಾತುಕತೆಯ ಮೂಲಕ ಎರಡೂ ದೇಶಗಳ ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಪುನಃಸ್ಥಾಪಿಸಲು ಮತ್ತು ಉಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.

ಭಾರತಕ್ಕೆ, ಚೀನಾದೊಂದಿಗಿನ ಸಂಬಂಧ ಅತ್ಯಂತ ಮುಖ್ಯವಾಗಿದೆ ಎಂದು ಅಮೆರಿಕದ ನ್ಯೂಸ್‌ವೀಕ್ ಮ್ಯಾಗಜಿನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

"ದ್ವಿಪಕ್ಷೀಯ ಮಾತುಕತೆಯ ಮೂಲಕ ನಮ್ಮ ಗಡಿಯಲ್ಲಿನ ದೀರ್ಘಕಾಲದ ಪರಿಸ್ಥಿತಿಯನ್ನು ತುರ್ತಾಗಿ ಪರಿಹರಿಸಬೇಕಾಗಿದೆ ಎಂಬುದು ನನ್ನ ನಂಬಿಕೆ. ಭಾರತ ಮತ್ತು ಚೀನಾ ನಡುವಿನ ಸ್ಥಿರ ಮತ್ತು ಶಾಂತಿಯುತ ಸಂಬಂಧ ನಮ್ಮ ಎರಡು ದೇಶಗಳಿಗೆ ಮಾತ್ರವಲ್ಲದೆ ಇಡೀ ಪ್ರದೇಶ ಮತ್ತು ಪ್ರಪಂಚ"ಕ್ಕೆ ಮುಖ್ಯ ಎಂದು ಮೋದಿ ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆ ಮೂಲಕ ಭಾರತ-ಚೀನಾ ಗಡಿಯಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯ: ಪ್ರಧಾನಿ ಮೋದಿ
ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿ; ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲ್ಲ: ಭವಿಷ್ಯ ನುಡಿದಿದ್ದೇನು?

ನ್ಯೂಯಾರ್ಕ್ ಮೂಲದ ಮ್ಯಾಗಜೀನ್‌ಗೆ ನೀಡಿದ 90 ನಿಮಿಷಗಳ ಸಂದರ್ಶನದಲ್ಲಿ ಪ್ರಧಾನಿಯವರು ಮುಂಬರುವ ಲೋಕಸಭೆ ಚುನಾವಣೆ, ಪಾಕಿಸ್ತಾನದೊಂದಿಗಿನ ಸಂಬಂಧ, ರಾಮಮಂದಿರ ಮತ್ತು ಪ್ರಜಾಪ್ರಭುತ್ವ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಜಗತ್ತಿನಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರಗಳ ಬಗೆಗಿನ ಅಸಮಾಧಾನವೂ ಹೆಚ್ಚಾಗಿದೆ. ಎರಡನೇ ಅವಧಿಯ ಅಂತ್ಯದ ವೇಳೆಗೆ ಸರ್ಕಾರಗಳು ಜನ ಬೆಂಬಲವನ್ನು ಕಳೆದುಕೊಳ್ಳಲು ಪ್ರಾರಂಭಿಸುತ್ತವೆ. ಆದರೆ ಇಲ್ಲಿ ಅಂದರೆ ಭಾರದತಲ್ಲಿ ನಮ್ಮ ಸರ್ಕಾರಕ್ಕೆ ಜನಬೆಂಬಲ ಹೆಚ್ಚುತ್ತಿದೆ ಎಂದರು.

ಭಾರತವು 11ನೇ ಅತಿದೊಡ್ಡ ಆರ್ಥಿಕತೆಯಿಂದ ಐದನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿರುವುದನ್ನು ಜನರು ನೋಡಿದ್ದಾರೆ. ಈಗ ಭಾರತವು ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು ಎಂಬುದು ದೇಶದ ಆಶಯವಾಗಿದೆ ಎಂದು ಹೇಳಿದರು.

ದ್ವಿಪಕ್ಷೀಯ ಮಾತುಕತೆ ಮೂಲಕ ಭಾರತ-ಚೀನಾ ಗಡಿಯಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯ: ಪ್ರಧಾನಿ ಮೋದಿ
ಏಪ್ರಿಲ್ 14ಕ್ಕೆ ಪ್ರಧಾನಿ ಮಂಗಳೂರಿಗೆ ಆಗಮನ: ಮೋದಿ ರ‍್ಯಾಲಿ ರದ್ದು, ರೋಡ್ ಶೋದಲ್ಲಿ ಮಾತ್ರ ಭಾಗಿ

ಪಾಕಿಸ್ತಾನದೊಂದಿಗಿನ ಬಾಂಧವ್ಯದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ಹೊಸದಾಗಿ ಅಧಿಕಾರ ವಹಿಸಿಕೊಂಡ ಪಾಕಿಸ್ತಾನದ ಪ್ರಧಾನಿಯನ್ನು ಅಭಿನಂದಿಸಿದ್ದೇನೆ. ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಮುಕ್ತವಾದ ವಾತಾವರಣದಲ್ಲಿ ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಯನ್ನು ಮುನ್ನಡೆಸಲು ಭಾರತ ಯಾವಾಗಲೂ ಬದ್ಧ ಎಂದು ಹೇಳಿರುವುದಾಗಿ ತಿಳಿಸಿದರು.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲುವಾಸ ಕುರಿತ ಪ್ರಶ್ನೆಗೆ, ಪಾಕಿಸ್ತಾನದ ಆಂತರಿಕ ವಿಷಯಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com