ಸಿಎಂ ಜಗನ್ ಮೋಹನ್ ರೆಡ್ಡಿ
ಸಿಎಂ ಜಗನ್ ಮೋಹನ್ ರೆಡ್ಡಿ

ವಿಜಯವಾಡ: ರೋಡ್ ಶೋ ವೇಳೆ ಕಲ್ಲು ಎಸೆತ, ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ

ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಿರುವಂತೆಯೇ ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ವರದಿಯಾಗುತ್ತಿವೆ.
Published on

ವಿಜಯವಾಡ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಿರುವಂತೆಯೇ ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ವರದಿಯಾಗುತ್ತಿವೆ. ನೆರೆಯ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ರೋಡ್ ಶೋ ವೇಳೆಯಲ್ಲಿ ದುಷ್ಕರ್ಮಿಗಳು ತೂರಿದ ಕಲ್ಲಿನಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ.

ಮೇಮಂತ ಸಿದ್ದಂ" ಬಸ್ ಯಾತ್ರೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಎಡಗಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿರುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸಿಎಂ ಜಗನ್ ಮೋಹನ್ ರೆಡ್ಡಿ
ಶೀಘ್ರದಲ್ಲೇ ಜಗನ್ ಮೋಹನ್ ರೆಡ್ಡಿ ಸರ್ಕಾರ ಪತನ: ಪವನ್ ಕಲ್ಯಾಣ್ ಭವಿಷ್ಯ

ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಸಿಎಂ ಜಗನ್ ಬಸ್ ಯಾತ್ರೆಯನ್ನು ಮುಂದುವರೆಸಿದ್ದಾರೆ. ಈ ಘಟನೆ ಹಿಂದೆ ಎದುರಾಳಿ ಟಿಡಿಪಿ ಪಕ್ಷದ ಕೈವಾಡವಿದೆ ಎಂದು ವೈಎಸ್ ಆರ್ ಪಿ ನಾಯಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com