ನಟ ಸಲ್ಮಾನ್ ಖಾನ್ ನಿವಾಸ ಎದುರು ಗುಂಡಿನ ದಾಳಿ: ಪೊಲೀಸರಿಂದ ತೀವ್ರ ತನಿಖೆ

ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಭಾನುವಾರ ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಲ್ಮಾನ್ ಖಾನ್
ಸಲ್ಮಾನ್ ಖಾನ್
Updated on

ಮುಂಬೈ: ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಭಾನುವಾರ ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ನಿವಾಸದ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಮುಂಬೈ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೊಯ್ ಹತ್ಯೆ ಮಾಡಬೇಕೆಂದು ಯೋಜನೆ ರೂಪಿಸಿದ್ದ ಪ್ರಮುಖ 10 ವ್ಯಕ್ತಿಗಳಲ್ಲಿ ನಟ ಸನ್ಮಾನ್ ಖಾನ್ ಕೂಡ ಸೇರಿದ್ದಾರೆ ಎಂದು ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಬಹಿರಂಗಪಡಿಸಿತ್ತು. ಸಲ್ಮಾನ್ ಖಾನ್ ಅವರ ಕುಖ್ಯಾತ 1998 ರ ಕೃಷ್ಣಮೃಗ ಬೇಟೆಯ ಪ್ರಕರಣ ಉಲ್ಲೇಖಿಸಿ, ಇದು ದರೋಡೆಕೋರನ ಪ್ರಕಾರ, ಬಿಷ್ಣೋಯ್ ಸಮುದಾಯ ಮೇಲೆ ನಟ ಎಸಗಿದ ಅಪರಾಧವಾಗಿದೆ.

ಬಿಷ್ಣೋಯ್ ತನ್ನ ಸಹಾಯಕನಾದ ಸಂಪತ್ ನೆಹ್ರಾ ಮೂಲಕ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾನೆ ಎಂದು ತನಿಖೆಯಿಂದ ಬಹಿರಂಗವಾಗಿತ್ತು, ಸಂಪತ್ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು.

ಕಳೆದ ವರ್ಷ ಏಪ್ರಿಲ್ 11 ರಂದು ಬಂದ ಮತ್ತೊಂದು ಬೆದರಿಕೆ ಕರೆ ನಂತರ ಮುಂಬೈ ಪೊಲೀಸರು ಸನ್ಮಾನ್ ಖಾನ್ ಅವರಿಗೆ Y+ ಯನ್ನು ನೀಡಿದ್ದರು. ಸನ್ಮಾನ್ ಖಾನ್ ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ಯುನೈಟೆಡ್ ಕಿಂಗ್‌ಡಂನಲ್ಲಿರುವ ಭಾರತೀಯ ವಿದ್ಯಾರ್ಥಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ (LOC) ಹೊರಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com