ಬಿಜೆಪಿ ಗೆಲ್ಲಬೇಕೆಂದು ಕಾಂಗ್ರೆಸ್ ಕೂಡ ಬಯಸುತ್ತದೆ ಎಂಬುದು ನನ್ನ ಅನಿಸಿಕೆ: ಗುಲಾಂ ನಬಿ ಆಜಾದ್

ಪಕ್ಷವನ್ನು ಬಲಪಡಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ನನಗೆ ಅನಿಸುತ್ತದೆ .
 ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Updated on

ದೋಡಾ: ಪಕ್ಷವನ್ನು ಬಲಪಡಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ನನಗೆ ಅನಿಸುತ್ತದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ದೋಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಗುಲಾಂ ನಬಿ ಆಜಾದ್ ಅವರು, ಈ ಹಿಂದೆ 23 ನಾಯಕರು ಕಾಂಗ್ರೆಸ್‌ನಲ್ಲಿ ವ್ಯವಸ್ಥೆ ಬದಲಾವಣೆಗೆ ಹರಸಾಹಸ ಪಡುತ್ತಿದ್ದರೂ ಹೈಕಮಾಂಡ್ ಯಾವುದಕ್ಕೂ ಕಿವಿಗೊಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ನವರು ಬಿಜೆಪಿಯನ್ನು ಗೆಲ್ಲಲು ಬಯಸುತ್ತಾರೆ ಎಂದು ಕೆಲವೊಮ್ಮೆ ನನಗೆ ಅನಿಸುತ್ತದೆ ಎಂದು ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.

ದೇಶ ಮತ್ತು ಈ ಪ್ರದೇಶದಲ್ಲಿ ಬಡತನ, ನಿರುದ್ಯೋಗ ಮತ್ತು ಹಣದುಬ್ಬರದ ಮೇಲಿನ ನಿಯಂತ್ರಣ ಪ್ರಮುಖ ಸಮಸ್ಯೆಗಳಾಗಿವ ಎಂದು ಅವರು ಹೇಳಿದರು. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ, ಅವರು ಪರಿಹರಿಸುವ ದೊಡ್ಡ ಸಮಸ್ಯೆ ಬಡತನ, ನಿರುದ್ಯೋಗ ಮತ್ತು ಹಣದುಬ್ಬರವನ್ನು ಕಡಿಮೆ ಮಾಡುವುದಾಗಿದೆ ಎಂದು ಹೇಳಿದ್ದಾರೆ.

 ಗುಲಾಂ ನಬಿ ಆಜಾದ್
ವಿಧಾನಸಭೆ ಚುನಾವಣೆ ಫಲಿತಾಂಶ: ಅಲ್ಪಸಂಖ್ಯಾತರು ಈಗ ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ: ಗುಲಾಂ ನಬಿ ಆಜಾದ್

ಚುನಾವಣೆಯು ಧರ್ಮದ ಮೇಲೆ ಅಲ್ಲ, ಅಭಿವೃದ್ಧಿಯ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು, ಪ್ರತ್ಯೇಕತಾವಾದಿಗಳು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಕಾಶ್ಮೀರವನ್ನು ಹಾಳು ಮಾಡಿದರು, ಈ ರಾಜಕಾರಣಿಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಲಕ್ಷ ಜನರು ಸಾವನ್ನಪ್ಪಿದ್ದಾರೆ. ಕಾಶ್ಮೀರದಲ್ಲಿ ಬೆಂಕಿ ಹಚ್ಚಿದ ನಂತರ ಎಲ್ಲ ನಾಯಕರೂ ಕಣಿವೆ ತೊರೆದು ಹೊರಗೆ ನೆಲೆಸಿದ್ದಾರೆ ಎಂದರು.

ಆಜಾದ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿನ ಬೆಳವಣಿಗೆಗಳನ್ನು ಜನರು ನೆನಪಿಸಿಕೊಳ್ಳಬೇಕು ಎಂದು ಹೇಳಿದರು. ಉಧಂಪುರದಲ್ಲಿ ಏಪ್ರಿಲ್ 19 ರಂದು, ಜಮ್ಮುವಿನಲ್ಲಿ ಏಪ್ರಿಲ್ 26 ರಂದು, ಅನಂತನಾಗ್-ರಜೌರಿಯಲ್ಲಿ ಮೇ 7 ರಂದು, ಶ್ರೀನಗರದಲ್ಲಿ ಮೇ 13 ರಂದು ಮತ್ತು ಮೇ 20 ರಂದು ಬಾರಾಮುಲ್ಲಾದಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com