ಗುಲಾಂ ನಬಿ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿಪಿಎಪಿ

ಡಿಪಿಎಪಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.
 ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Updated on

ಶ್ರೀನಗರ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ(ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಬುಧವಾರ ತಿಳಿಸಿದೆ.

ಪಕ್ಷ ಈಗ ತನ್ನ ನಾಯಕ ಮೊಹಮ್ಮದ್ ಸಲೀಮ್ ಪರ್ರೆ ಅವರನ್ನು ಅನಂತನಾಗ್-ರಜೌರಿ ಕ್ಷೇತ್ರದಿಂದ ಕಣಕ್ಕೆ ಇಳಿಸಲು ನಿರ್ಧರಿಸಿದೆ ಎಂದು ಡಿಪಿಎಪಿಯ ಕಾಶ್ಮೀರ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಅವರು ಹೇಳಿದ್ದಾರೆ.

ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಅವರು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

 ಗುಲಾಂ ನಬಿ ಆಜಾದ್
ಬಿಜೆಪಿ ಗೆಲ್ಲಬೇಕೆಂದು ಕಾಂಗ್ರೆಸ್ ಕೂಡ ಬಯಸುತ್ತದೆ ಎಂಬುದು ನನ್ನ ಅನಿಸಿಕೆ: ಗುಲಾಂ ನಬಿ ಆಜಾದ್

ಇಂದು ಅನಂತನಾಗ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಟ್, "ಆಜಾದ್ ಅವರು(ಅನಂತನಾಗ್-ರಾಜೌರಿ ಕ್ಷೇತ್ರದಿಂದ) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆಜಾದ್ ಅವರೊಂದಿಗೆ ಸಭೆ ನಡೆಸಲಾಗಿದ್ದು, ಅನಂತನಾಗ್-ರಜೌರಿ ಸ್ಥಾನಕ್ಕೆ ವಕೀಲ ಸಲೀಮ್ ಪರ್ರೆ ಡಿಪಿಎಪಿ ಅಭ್ಯರ್ಥಿ ಎಂದು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.

ಆಜಾದ್ ಅವರು ಚುನಾವಣೆಗೆ ಸ್ಪರ್ಧಿಸದಿರಲು ಕೆಲವು ಕಾರಣಗಳಿವೆ ಎಂದ ಡಿಪಿಎಪಿ ನಾಯಕ, ನಾವು ಆ ಕ್ಷೇತ್ರದಿಂದ ಬೆರೆಯವರನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಂಡಿದ್ದೇವೆ" ಎಂದು ಹೇಳಿದರು.

ಏಪ್ರಿಲ್ 2 ರಂದು, ಆಜಾದ್ ಅವರು ಅನಂತನಾಗ್-ರಾಜೌರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಡಿಪಿಎಪಿ ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com