ದೆಹಲಿಯಲ್ಲಿ ಸತತ ಮೂರನೇ ಬಾರಿಗೆ ಎಲ್ಲಾ ಕ್ಷೇತ್ರ ಗೆಲ್ಲುವುದು ಬಿಜೆಪಿ ಟಾರ್ಗೆಟ್; ಕೇಜ್ರಿವಾಲ್ ಪರ ಅನುಕಂಪ ಆಮ್ ಆದ್ಮಿ ಪಕ್ಷಕ್ಕೆ ಆಧಾರ?

ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸತತ 3 ನೇ ಬಾರಿಗೆ ಜಯಗಳಿಸುವತ್ತ ಬಿಜೆಪಿ ಗಮನ ಹರಿಸಿದೆ.
ಪ್ರಧಾನಿ ನರೇಂದ್ರ ಮೋದಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್TNIE

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸತತ 3 ನೇ ಬಾರಿಗೆ ಜಯಗಳಿಸುವತ್ತ ಬಿಜೆಪಿ ಗಮನ ಹರಿಸಿದೆ. ಇತ್ತ ಕಾಂಗ್ರೆಸ್ ಜೊತೆಗೆ ಚುನಾವಣೆ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷ ಈ ಬಾರಿ ಅರವಿಂದ್ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಪರ ಅನುಕಂಪದ ಅಲೆಯನ್ನೇ ಮತಗಳನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ.

ಆಮ್ ಆದ್ಮಿ ಪಕ್ಷ- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ ದೆಹಲಿಯಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ದೆಹಲಿಯ 7 ಸ್ಥಾನಗಳ ಪೈಕಿ ಆಮ್ ಆದ್ಮಿ ಪಕ್ಷ 4 ರಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ 3 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ಹೈ-ಪ್ರೊಫೈಲ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಜೆಪಿಯ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್ ದೇವ್, ಗೆಲುವಿನ ಅಂತರವನ್ನು ಹೆಚ್ಚಿಸಿಕೊಳ್ಳುವುದು ಪಕ್ಷಕ್ಕೆ ಈ ಬಾರಿ ಇರುವ ಸವಾಲಾಗಿದೆ ಎಂದು ಹೇಳಿದ್ದಾರೆ.

ಪೂರ್ವಾಂಚಲಿಗಳು ಮತ್ತು ಮುಸ್ಲಿಮರ ಪ್ರಾಬಲ್ಯವಿರುವ ಈಶಾನ್ಯ ದೆಹಲಿ ಸ್ಥಾನವು ಬಿಹಾರದಿಂದ ಬಂದ ಇಬ್ಬರು ಅಭ್ಯರ್ಥಿಗಳ ನಡುವಿನ ಪ್ರಮುಖ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಲೋಕಸಭೆಯಲ್ಲಿ ಮೂರನೇ ಅವಧಿಯ ಮೇಲೆ ಕಣ್ಣಿಟ್ಟಿರುವ ಮನೋಜ್ ತಿವಾರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ, ಆದರೆ ಕಾಂಗ್ರೆಸ್‌ನ ಕನ್ಹಯ್ಯಾ ಕುಮಾರ್ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ.

ಬಿಹಾರದಲ್ಲಿ ಕನ್ಹಯ್ಯ ಕುಮಾರ್ 2019 ರ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್
2014 ರಲ್ಲಿ ಭರವಸೆಯೊಂದಿಗೆ ಬಂದೆವು, 2019 ರಲ್ಲಿ ನಂಬಿಕೆ, 2024 ರಲ್ಲಿ ಗ್ಯಾರಂಟಿ: ಪ್ರಧಾನಿ ಮೋದಿ

ಹೆಸರನ್ನು ಗೌಪವಾಗಿರಿಸುವಂತೆ ಮನವಿ ಮಾಡಿದ ಬಿಜೆಪಿ ನಾಯಕರೊಬ್ಬರು ಚುನಾವಣೆಗಳ ಬಗ್ಗೆ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ತಿವಾರಿ ಅವರಿಗೆ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ ಹಾಗೂ ಕನ್ಹಯ್ಯ ಕುಮಾರ್ ಧ್ರುವೀಕರಣ ಪರಿಣಾಮಗಳನ್ನು ಎದುರಿಸಲಿದ್ದಾರೆ ಎಂದು ಹೇಳಿದ್ದಾರೆ.

2025ರಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ನಡೆಯಲಿರುವ ನಿರ್ಣಾಯಕ ಚುನಾವಣೆಯಲ್ಲಿ ಛಾಪು ಮೂಡಿಸಲು ಕುಮಾರ್ ಅವರ ಜನಪ್ರಿಯತೆ ಮತ್ತು ಅವರ ವಾಕ್ಚಾತುರ್ಯವನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ.

ಪೂರ್ವ ದೆಹಲಿಯಲ್ಲಿ, ಎಎಪಿ ತನ್ನ ದಲಿತ ಶಾಸಕ ಕುಲದೀಪ್ ಕುಮಾರ್ ಅವರನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸ್ಪರ್ಧಿಸುವ ಕ್ಷೇತ್ರದಿಂದ ಕಣಕ್ಕಿಳಿಸಿದೆ, ಇದು ವಿವಿಧ ಲೋಕಸಭಾ ಸ್ಥಾನಗಳಲ್ಲಿ ಹರಡಿರುವ 12 ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿನ ಸಮುದಾಯದ ಮತದಾರರ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿಯೊಂದಿಗಿನ ನೇರ ಸ್ಪರ್ಧೆಯ ಲಾಭ ಪಡೆಯುವುದರ ಜೊತೆಗೆ, ಪೂರ್ವ ದೆಹಲಿಯಲ್ಲಿ ದಲಿತ ಮತ್ತು ಮುಸ್ಲಿಂ ಮತದಾರರಲ್ಲಿ ಮೋದಿ ವಿರೋಧಿ ಭಾವನೆ ಇದೆ ಎಂದು ಎಎಪಿ ಹೇಳಿಕೊಂಡಿದೆ, ಅದು ಚುನಾವಣೆಯಲ್ಲಿ ಲಾಭವನ್ನು ನೀಡುತ್ತದೆ ಎಂದು ಆಮ್ ಆದ್ಮಿ ಪಕ್ಷ ವಿಶ್ವಾಸ ಹೊಂದಿದೆ. 2019 ರಲ್ಲಿ, ಗೌತಮ್ ಗಂಭೀರ್ ಕಾಂಗ್ರೆಸ್‌ನ ಅರವಿಂದರ್ ಸಿಂಗ್ ಲವ್ಲಿ ಅವರನ್ನು 3.93 ಲಕ್ಷ ಮತಗಳಿಂದ ಸೋಲಿಸಿ ಸ್ಥಾನವನ್ನು ಗೆದ್ದರು. ಎಎಪಿಯ ಅತಿಶಿ ಸ್ಪರ್ಧೆಯಲ್ಲಿ ಮೂರನೇ ಸ್ಥಾನದಲ್ಲಿದ್ದರು.

ಪ್ರಧಾನಿ ನರೇಂದ್ರ ಮೋದಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್
ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಈಶಾನ್ಯ ದೆಹಲಿ ಕ್ಷೇತ್ರದಿಂದ ಕನ್ಹಯ್ಯಾ ಕುಮಾರ್ ಕಣಕ್ಕೆ

ಈ ಬಾರಿ ಎಎಪಿ ಮತ್ತು ಕಾಂಗ್ರೆಸ್ ಒಗ್ಗೂಡುವುದರಿಂದ ಬಿಜೆಪಿ ವಿರೋಧಿ ಮತಗಳನ್ನು ಕ್ರೋಢೀಕರಿಸುವ ಸಾಧ್ಯತೆಯಿದೆ ಎಂದು ಎಎಪಿ ನಾಯಕರು ಹೇಳಿದ್ದಾರೆ. ಆದಾಗ್ಯೂ, ದೆಹಲಿಯ ಬಿಜೆಪಿ ನಾಯಕರು 2014 ರಿಂದ ಪಕ್ಷವು ಹೊಂದಿರುವ ಎಲ್ಲಾ ಏಳು ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸ ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com