ದ್ವೇಷ ಪೂರಿತ ಭಾಷಣ ಆರೋಪ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರ ವಿರುದ್ಧ ಪ್ರಕರಣ ದಾಖಲು

ಇತ್ತೀಚೆಗೆ ಕೋಝಿಕ್ಕೋಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಶಾಮಾ ಮೊಹಮ್ಮದ್ ವಿರುದ್ಧ ಕೇರಳ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೇರಳ: ಇತ್ತೀಚೆಗೆ ಕೋಝಿಕ್ಕೋಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಶಾಮಾ ಮೊಹಮ್ಮದ್ ವಿರುದ್ಧ ಕೇರಳ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.

ಚುನಾವಣಾ ಆಯೋಗ ರವಾನಿಸಿದ ದೂರಿನ ಆಧಾರದ ಮೇಲೆ.ಮೊಹಮ್ಮದ್ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 ( ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವೈದ್ಯಕೀಯ ಕಾಲೇಜು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಸಮಿತಿ ತಿರುವನಂತಪುರಂ ಮೂಲದವರಿಂದ ದೂರನ್ನು ಸ್ವೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಶಿವಮೊಗ್ಗ: ದ್ವೇಷಪೂರಿತ ಭಾಷಣ, ಸಾಧ್ವಿ ಪ್ರಜ್ಞಾ ವಿರುದ್ಧ ಎಫ್ ಐಆರ್ ದಾಖಲು

ಕುಟ್ಟಿಕ್ಕತ್ತೂರು ಪ್ರದೇಶದಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮೊಹಮ್ಮದ್ "ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ಥಳಗಳಿಗೆ ಹಾನಿಯಾಗುತ್ತದೆ" ಎಂದು ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವಿರಲಿಲ್ಲ, ತಾವು ಹೇಳಿದ ಮಾತಿಗೆ ಬದ್ಧವಾಗಿರುವುದಾಗಿ ಮೊಹಮ್ಮದ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com