ಒಡಿಶಾ: ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು, 7 ಮಂದಿ ನಾಪತ್ತೆ

ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಮಹಾನದಿ ನದಿಯಲ್ಲಿ ದೋಣಿಯೊಂದು ಮುಳುಗಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಜಾರ್ಸುಗುಡಾ: ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಮಹಾನದಿ ನದಿಯಲ್ಲಿ ದೋಣಿಯೊಂದು ಮುಳುಗಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆಯ ಛತ್ತೀಸ್‌ಗಢದ ಖಾರ್ಸಿಯಾ ಪ್ರದೇಶದ ಸುಮಾರು 50 ಪ್ರಯಾಣಿಕರು ಒಡಿಶಾದ ಬರ್ಗಢ್ ಜಿಲ್ಲೆಯ ಪಥರ್ಸೇನಿ ಕುಡಾದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ ದೋಣಿಯಲ್ಲಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

"ನಾಪತ್ತೆಯಾದವರಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳಿದ್ದಾರೆ. ಎಲ್ಲರೂ ಪತ್ತೆಯಾಗುವವರೆಗೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಉತ್ತರ ರೇಂಜ್ ಐಜಿ ಹಿಮಾಂಶು ಲಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com