ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ. ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.
ದೆಹಲಿ ಸಿಎಂ ಕೇಜ್ರಿವಾಲ್
ದೆಹಲಿ ಸಿಎಂ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಯುವವರೆಗೆ ಅವರಿಗೆ ಜಾಮೀನು ಒದಗಿಸಬೇಕೆಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು.

ದೆಹಲಿ ಸಿಎಂ ಕೇಜ್ರಿವಾಲ್
ಅಬಕಾರಿ ಪ್ರಕರಣದಲ್ಲಿ ಇಡಿ ಸಮನ್ಸ್: ದೆಹಲಿ ಹೈಕೋರ್ಟ್ ನಲ್ಲಿ ನಾಳೆ ಕೇಜ್ರಿವಾಲ್ ಅರ್ಜಿ ವಿಚಾರಣೆ

ಈ ಅರ್ಜಿಯನ್ನು ತಿರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಮತ್ತು ನ್ಯಾಯಮೂರ್ತಿ ಮನಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರ ವಿಭಾಗೀಯ ಪೀಠ, ಅರ್ಜಿಯನ್ನು ಯಾವುದೇ ಆಧಾರವಿಲ್ಲದೆ ಸಲ್ಲಿಸಲಾಗಿದೆ. ಪಿಐಎಲ್‌ ಸಲ್ಲಿಸಲು ಕೇಜ್ರಿವಾಲ್‌ ಅಧಿಕಾರ ನೀಡಿದ ಪವರ್‌ ಆಫ್‌ ಅಟಾರ್ನಿಯನ್ನು ಅರ್ಜಿದಾರರು ಹೊಂದಿಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿದಾರನಿಗೆ ರೂ 75,000 ವೆಚ್ಚಗಳನ್ನು ಪಾವತಿಸುವಂತೆ ಆದೇಶಿಸಿದೆ.

ಈ ಪಿಐಎಲ್‌ ಅನ್ನು “ವಿ, ದಿ ಪೀಪಲ್‌ ಆಫ್‌ ಇಂಡಿಯಾ” ಎಂಬ ಹೆಸರಿನಲ್ಲಿ ಸಲ್ಲಿಸಲಾಗಿತ್ತಲ್ಲದೆ. ತಮಗೆ ಯಾವುದೇ ಪ್ರಚಾರ ಬೇಡ ಎಂದು ಹೇಳಿ ಹೆಸರು ಬಳಸಿಲ್ಲ, ತಾವು ದೆಹಲಿ ಜನರನ್ನು ಪ್ರತಿನಿಧಿಸುತ್ತಿರುವುದಾಗಿ ಅರ್ಜಿದಾರ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com