ಮನೋವೈದ್ಯ ಚಂದ್ರಶೇಖರ್, ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ

ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್
ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್online desk

ನವದೆಹಲಿ: ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಚಂದ್ರಶೇಖರ್ ಅವರು ಬೆಂಗಳೂರಿನ ಸುತ್ತಮುತ್ತಲ ಹಲವು ಗ್ರಾಮಗಳನ್ನು ದತ್ತುಪಡೆದಿದ್ದರು. ಅಷ್ಟೇ ಅಲ್ಲದೇ ಮನೋ ವೈದ್ಯಕೀಯ ಚಿಕಿತ್ಸೆ ನೀಡುವ ಅವರು, ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಮನೆಗಳಿಗೆ ತೆರಳಿ ಚಿಕಿತ್ಸೆ ನೀಡಿದ್ದರು. ಚಂದ್ರಶೇಖರ್ ಅವರು UNICEF, ಅನೇಕ NGOಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ಸಲಹೆಗಾರರಾಗಿದ್ದಾರೆ.

ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್
ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ ಅಭಿನಂದನೆ

ಚಂದ್ರಶೇಖರ್ ಅವರು ಚನ್ನಪಟ್ಟಣ ಪಟ್ಟಣದಲ್ಲಿ ಆಭರಣ ವ್ಯಾಪಾರಿಯಾಗಿದ್ದ ಬಿ.ಎಂ.ರಾಜಣ್ಣಾಚಾರ್ ಅವರ ಪುತ್ರನಾಗಿ ಜನಿಸಿದ್ದು, ಆರಂಭಿಕ ಶಿಕ್ಷಣದ ನಂತರ, ಅವರು ಬೆಂಗಳೂರಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸೇರಿ 1973 ರಲ್ಲಿ ವೈದ್ಯಕೀಯ ಪದವಿಯನ್ನು ಪೂರ್ಣಗೊಳಿಸಿದರು.

ನಂತರ 1978 ರಲ್ಲಿ ಔಷಧಶಾಸ್ತ್ರದಲ್ಲಿ ಡಿಪ್ಲೊಮಾ ಮತ್ತು ಮನಶ್ಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ನಂತರ ಅವರು ನಿಮ್ಹಾನ್ಸ್‌ನಲ್ಲಿ ರೆಸಿಡೆಂಟ್ ಡಾಕ್ಟರ್ ಆಗಿ ಸೇವೆ ಸಲ್ಲಿಸಿ 2013 ರಲ್ಲಿ ನಿವೃತ್ತರಾದರು. ಚಂದ್ರಶೇಖರ್ ತಳಮಟ್ಟದಲ್ಲಿ ಸಲಹೆಗಾರರಿಗೆ ತರಬೇತಿ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸುವಲ್ಲಿ ಪ್ರವರ್ತಕರಾಗಿದ್ದಾರೆ. ಚಂದ್ರಶೇಖರ್ ಫೆಬ್ರವರಿ 9, 2007 ರಂದು ಸಮಾಧಾನ ಕೌನ್ಸೆಲಿಂಗ್ ಟ್ರಸ್ಟ್ ಸೆಂಟರ್ ನ್ನು ಪ್ರಾರಂಭಿಸಿದರು, ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಉಚಿತ ಸಲಹೆಯನ್ನು ನೀಡಿದ್ದಾರೆ.

ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್
ಎಲ್‌ಕೆ ಅಡ್ವಾಣಿ ನಿವಾಸದಲ್ಲಿಯೇ 'ಭಾರತ ರತ್ನ' ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತದಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಆರೋಗ್ಯದ ಕುರಿತು 100 ಕ್ಕೂ ಹೆಚ್ಚು ಪುಸ್ತಕಗಳ ಸಂಪಾದಕರಾಗಿದ್ದಾರೆ. ಅವರು ಕನ್ನಡ ವೈದ್ಯ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು ಕನ್ನಡದಲ್ಲಿ 280 ಕ್ಕೂ ಹೆಚ್ಚು ಪುಸ್ತಕಗಳನ್ನು ಮತ್ತು ಇಂಗ್ಲಿಷ್ನಲ್ಲಿ 30 ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಸುಲಭ್ ಇಂಟರ್‌ನ್ಯಾಶನಲ್‌ನ ಸಂಸ್ಥಾಪಕ ಬಿಂದೇಶ್ವರ್ ಪಾಠಕ್ ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಬಿಂದೇಶ್ವರ್ ಪಾಠಕ್ ಪಾಠಕ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಯಿತು ಮತ್ತು ಖ್ಯಾತ ಭರತನಾಟ್ಯ ನೃತ್ಯಗಾರ್ತಿ ಪದ್ಮಾ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಯಿತು.

ನಟ ಮಿಥುನ್ ಚಕ್ರವರ್ತಿ, ಗಾಯಕಿ ಉಷಾ ಉತ್ತುಪ್, ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ರಾಮ್ ನಾಯ್ಕ್ ಮತ್ತು ಕೈಗಾರಿಕೋದ್ಯಮಿ ಸೀತಾರಾಮ್ ಜಿಂದಾಲ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್
ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ 132 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com