ಮಹಾರಾಷ್ಟ್ರ: ಭಾಷಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆದಿದೆ.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Updated on

ಯವತ್ಮಾಲ್‌: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆದಿದೆ.

ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪುಸಾದ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಡ್ಕರಿ ಅವರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಅಂಗರಕ್ಷಕರು ಹಾಗೂ ಪಕ್ಷದ ನಾಯಕರು ಧಾವಿಸಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ವೈದ್ಯರು ಇದ್ದ ಕಾರಣ ಅವರನ್ನು ಪರೀಕ್ಷೆ ಮಾಡಿ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ.

ನಿತಿನ್ ಗಡ್ಕರಿ
ಎಕ್ಸ್ ನಲ್ಲಿ ಅವಹೇಳನಕಾರಿ ಸುದ್ದಿ: ಖರ್ಗೆ, ಜೈರಾಮ್ ರಮೇಶ್ ಗೆ ನೋಟಿಸ್ ಕಳುಹಿಸಿದ ಗಡ್ಕರಿ

"ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಬಿಸಿಲಿನ ಕಾರಣದಿಂದ ನಾನು ಅಸ್ವಸ್ಥನಾಗಿದ್ದೆ. ಆದರೆ ಈಗ ನಾನು ಸಂಪೂರ್ಣವಾಗಿ ಸರಿಯಾಗಿದ್ದೇನೆ ಮತ್ತು ಮುಂದಿನ ರ್ಯಾಲಿಯಲ್ಲಿ ಭಾಗವಹಿಸಲು ವರುದ್‌ಗೆ ಹೋಗುತ್ತಿದ್ದೇನೆ" ಎಂದು 66 ವರ್ಷದ ನಿತಿನ್ ಗಡ್ಕರಿ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com